Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್ಚು ಅಂಕಪಡೆದ ವಿದ್ಯಾರ್ಥಿಗೆ ಸನ್ಮಾನ:

ಸಿರುಗುಪ್ಪ.ಜೂ.07:- ಎಸ್.ಎಸ್.ಎಲ್.ಸಿ. ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ದ್ವಿತಿಯ ಪಿ.ಯು.ಸಿ. ಪರೀಕ್ಷೆಯನ್ನು ಸುಗಮವಾಗಿ ಎದುರಿಸಲು ಅನುಕೂಲವಾಗುತ್ತದೆ ಎಂದು ಬಿ.ಇ.ಒ. ಹೆಚ್.ಗುರಪ್ಪ ತಿಳಿಸಿದರು.
ನಗರದ ವಿಜಯಮೇರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ 2023-24ನೇ ಸಾಲಿನಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಕೆ.ಎಂ.ನ0ದೀಶ್‌ಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ನಿರ್ಧಿಷ್ಟವಾದ ಜ್ಞಾನವನ್ನು ಗಳಿಸುವ ಗುರಿಯನ್ನು ಹೊಂದುವ ಮನೋಭಾವ ಬೆಳೆಸಿಕೊಳ್ಳಬೇಕು, ಉತ್ತಮ ನಾಗರಿಕರಾಗಿ ಉನ್ನತ ಹುದ್ದೆಯನ್ನು ಪಡೆದು ಜೀವನದಲ್ಲಿ ಯಶಸ್ವಿಯಾಗಬೇಕು.
2023-24ನೇ ಸಾಲಿನ ಪ್ರಥಮ ಫಲಿತಾಂಶದಲ್ಲಿ ಕೆ.ಎಂ.ನ0ದೀಶ ಅವರಿಗೆ 625ಕ್ಕೆ 604 ಅಂಕಗಳನ್ನು ಲಭಿಸಿದ್ದವು, ನಂತರ ಮರು ಮೌಲ್ಯ ಮಾಪನ ಮಾಡಿಸಿದಾಗ 625ಕ್ಕೆ 619 ಅಂಕಗಳು ಪಡೆದು ತಾಲ್ಲೂಕಿಗೆ ಪ್ರಥಮ ಮತ್ತು ಜಿಲ್ಲೆಗೆ ದ್ವಿತಿಯ ಸ್ಥಾನ ಹಾಗೂ ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾನೆ ಎಂದು ಹೇಳಿದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸಿಸ್ಟರ್ ಲೂರ್ದ ಮೇರಿ, ಮುಖ್ಯಗುರು ಸಿಸ್ಟರ್ ಸಂತೋಷ ಮೇರಿ ಹಾಗೂ ಬಿ.ಆರ್.ಸಿ ತಮ್ಮನಗೌಡ ಪಾಟೀಲ್, ಸಿ.ಆರ್.ಪಿ.ಮಾರುತಿ, ದೈಹಿಕ ಶಿಕ್ಷಕ ಉಪೇಂದ್ರ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಸಿರುಗುಪ್ಪ: ನಗರದ ವಿಜಯಮೇರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಕೆ.ಎಂ.ನoದೀಶ್‌ಗೆ ಸನ್ಮಾನಿಸಲಾಯಿತು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ