Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಗ್ರಾಮ ಒನ್ ಕೇಂದ್ರದಲ್ಲಿ ಖಾಲಿ ಇರುವ ಫ್ರಾಂಚೈಸಿ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಬಳ್ಳಾರಿ,ಜು.04
ಜಿಲ್ಲಾದ್ಯಂತ ನಾಗರಿಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿರುವ ‘ಗ್ರಾಮ ಒನ್' ಕೇಂದ್ರಗಳ ಪೈಕಿ, ಪ್ರಸ್ತುತ ಖಾಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ತಿಳಿಸಿದೆ.
ಸರ್ಕಾರದ ಇ-ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ಸೂಚನೆಯಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಗೆ ಒಟ್ಟು 177 ಗ್ರಾಮ ಒನ್ ಕೇಂದ್ರಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 167 ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಉಳಿದ ಕೇಂದ್ರಗಳ ಪೈಕಿ 09 ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳು ಸದ್ಯ ಪರಿಶೀಲನಾ ಹಂತದಲ್ಲಿದ್ದು, ಬಾಕಿ ಇರುವ 01 ಕೇಂದ್ರಕ್ಕೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.
*ಖಾಲಿ ಇರುವ ಕೇಂದ್ರದ ವಿವರ:*
ಸಂಡೂರು ತಾಲ್ಲೂಕಿನ ನರಸಿಂಗಪುರ ಗ್ರಾಮ ಪಂಚಾಯಿತಿ.
ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಸಂಪೂರ್ಣ ವಿವರಗಳನ್ನು https://sevasindhuservices.karnataka.gov.in/directApply... ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಆಸಕ್ತರು ಅಧಿಕೃತ ಲಿಂಕ್ ಬಳಸಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ವಕ್ಫ್ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ವಕ್ಫ್ ಅಧಿಕಾರಿ ಸೂಚನೆಬಳ್ಳಾರಿಯಲ್ಲಿ ವನಮಹೋತ್ಸವ ಅಂಗವಾಗಿ ‘ಗ್ರೀನ್ ಮಾರ್ಚ್’ ಪರಿಸರ ಕಾಳಜಿ ಕೇವಲ ಒಂದು ದಿನಕ್ಕೆ ಸೀಮಿತ ಬೇಡ: ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ ಕೋಟ್ಯಾಳದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ ಸಿಎಸ್ ಆರ್ ಅನುದಾನದಡಿ ಉನ್ನತೀಕರಿಸಿದ ಪ್ರೌಢ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ: ಮುಂಗಾರು ಬೆಳೆಗೆ ನೀರಿಲ್ಲ, ಕುಡಿಯಲು ಮಾತ್ರ ಬಳಕೆಅಂಜನಾದ್ರಿ, ಆನೆಗುಂದಿಯ ವಿವಿಧ ಪ್ರವಾಸಿ ತಾಣಗಳಿಗೆ ಯುರೋಪ್ ದೇಶಗಳ ಕಂಟೆಂಟ್ ಕ್ರಿಯೇಟರ್ಸ್ & ಇನ್ ಫ್ಲೂಯನ್ಸರ್ಸ್ ಭೇಟಿಬಳ್ಳಾರಿ: ಗ್ರಾಮ ಒನ್ ಕೇಂದ್ರದಲ್ಲಿ ಖಾಲಿ ಇರುವ ಫ್ರಾಂಚೈಸಿ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನಸರ್ಕಾರಿ ಆದರ್ಶ ವಿದ್ಯಾಲಯ: 7, 8 ಮತ್ತು 9ನೇ ತರಗತಿಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ಜುಲೈ 6, 7 ಕ್ಕೆ ದಾಖಲಾತಿ