Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತರಿಂದ ಜೂನ್ 24 ಕ್ಕೆ ಬೆಂಗಳೂರು ಚಲೋ..!


ರಾಜ್ಯ ಸರ್ಕಾರವು ಸರ್ಕಾರಿ ಶಾಲೆಯಲ್ಲಿ ಎಲ್.ಕೆಜಿ ಮತ್ತು ಯುಕೆಜಿ, ಪ್ರಾರಂಭಿಸಲು ಹಾತುರದ ನಿರ್ಧಾರ ಕೈಗೊಂಡಿರುವುದು ಅತ್ಯಂತ ಖಂಡನಾರ್ಹ ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿಯನ್ನು ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತರೇನು ಶೈಕ್ಷಣಿಕವಾಗಿ ಹಿಂದುಳಿದಿಲ್ಲ. ಇವರು ಕೂಡ ಪದವಿವರೆಗೆ ಶಿಕ್ಷಣವನ್ನು ಪಡೆದಿದ್ದಾರೆ. ಆದ್ದರಿಂದ ಇದೇ ಜೂನ್ 24 ರಂದು ಈ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧರಿಸಲಾಗಿದೆ ಎಂದು ಎಐಟಿಯುಸಿ ಗೌರವಾಧ್ಯಕ್ಷರಾದ ಡಿ.ಎಚ್.ಕಂಬಳಿ ತಿಳಿಸಿದರು.


ಈ ಕುರಿತು ಪತ್ರಿಕಾ ಭವನದಲ್ಲಿ ಅಂಗನವಾಡಿ ಫೆಡರೇಶನ್ ಸಂಘಟನೆ ವತಿಯಿಂದ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ತರಾತುರಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆಜಿ, ಯುಕೆಜಿ, ಪ್ರಾರಂಭಿಸಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಈ ರೀತಿ ನಿರ್ಧಾರ ಕೈಗೊಂಡಾಗ ಅಂಗನವಾಡಿ ಕಾರ್ಯಕರ್ತರು ರಾಜ್ಯದಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಿದ್ದರು. ಆಗ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ನೀತಿಯನ್ನು ಖಂಡಿಸಿದ ಅವರು, ಈಗ ತಾವೇ ಅಂಗನವಾಡಿ ಕಾರ್ಯಕರ್ತರ ಭವಿಷ್ಯಕ್ಕೆ ಮಾರಕವಾಗುವಂತಹ ನಿರ್ಣಯ ಕೈಗೊಂಡಿರುವುದು ತಕ್ಷಣವೇ ಕೈಬಿಡಬೇಕು ಈ ಎಲ್ಲಾ ಬೇಡಿಕೆಗಳನ್ನು ಇಟ್ಟುಕೊಂಡು ಇದೇ ತಿಂಗಳ 24 ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಅಂದು ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ, ಈ ಹೋರಾಟದ ಯಶಸ್ವಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ: ತಿಪ್ಪಯ್ಯಶೆಟ್ಟಿ, ಲಕ್ಷ್ಮಿ, ಸಾವಿತ್ರಿ, ಗಿರಿಜಮ್ಮ, ರತ್ನಮ್ಮ, ಸುಲೋಚನ, ನಾಗರತ್ನ, ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ