ಶಿವಮೊಗ್ಗ, ಜೂ 23ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್ ಎಸ್ ಪಿ) ಮೂಲಕ ತಮ್ಮ ಎಸ್ ಎ ಟಿ ಎಸ್ ಐಡಿ ಬಳಸಿ ಹೊಸದಾಗಿ ಅಥವಾ ನವೀಕರಣಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
31.01.2027 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಖುದ್ದಾಗಿ ಭದ್ರಾವತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು
ಸಹಾಯಕ ನಿರ್ದೇಶಕರು (ಗ್ರೇಡ್ 1) ತಿಳಿಸಿದ್ದಾರೆ.
