Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾಗ್ಯಲಕ್ಷ್ಮೀ ಬಾಂಡ್ ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿ: ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಲು ಸೂಚನೆ


ಚಿತ್ರದುರ್ಗಮಾ.07:

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯು 2006-07ನೇ ಸಾಲಿನಿಂದ ಜಾರಿಯಾಗಿದ್ದು, ಪ್ರಸ್ತುತ ನೋಂದಣಿ ಜಾರಿಯಲ್ಲಿದ್ದು, ಈಗಾಗಲೇ ನೋಂದಣಿಯಾಗಿ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ 2024-25ನೇ ಸಾಲಿನಿಂದ ಪರಿಪಕ್ವ ಮೊತ್ತ ಒದಗಿಸಬೇಕಾಗಿರುತ್ತದೆ.

ಪರಿಪಕ್ವ ಮೊತ್ತ ಒದಗಿಸಲು ಹಾಗೂ ಹೊಸದಾಗಿ ಭಾಗ್ಯಲಕ್ಷ್ಮೀ ಬಾಂಡ್ (ಸುಕನ್ಯ ಸಮೃದ್ಧಿ ಯೋಜನೆ) ಪಡೆಯುವ ಕ್ರಮಗಳ ಬಗ್ಗೆ ತಾಲ್ಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ.

ಭಾಗ್ಯಲಕ್ಷ್ಮೀ (ಸುಕನ್ಯ ಸಮೃದ್ಧಿ ಯೋಜನೆ) ಯೋಜನೆಯಡಿ ನೋಂದಣಿಯಾಗಿರುವ ಎಲ್ಲಾ ಫಲಾನುಭವಿಗಳಿಗೆ, ಸಾರ್ವಜನಿಕರ ಗಮನಕ್ಕೆ ತರಬಯಸುವುದೆನೆಂದರೆ ಈ ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ನೋಂದಣಿ ಹಾಗೂ ಪರಿಪಕ್ವ ಮೊತ್ತ ಪಾವತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ತಾಲ್ಲೂಕು ಕಛೇರಿಗಳಲ್ಲಿ ಮದ್ಯವರ್ತಿಗಳಾಗಲೀ ಅಥವಾ ಸಿಬ್ಬಂದಿಗಳಾಗಲೀ ಹಣ ಕೇಳಿದಲ್ಲಿ ನೇರವಾಗಿ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448566058, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9448873683, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9945888425, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-7892661086, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು-9481182921, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -8867404421, ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು -7353002417, ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು- 9480500575 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ