Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಶಾ ಮುಕ್ತ ಭಾರತ ಅಭಿಯಾನ ಮಾದಕ ವಸ್ತು ವಿರುದ್ಧ ಜಾಗೃತಿಗೆ ಚಿತ್ರದುರ್ಗದಲ್ಲಿ ಬೈಕ್ ಜಾಥಾ



ಚಿತ್ರದುರ್ಗ  ಆಗಸ್ಟ್ 30:

ನಶಾ ಮುಕ್ತ ಭಾರತ ಅಭಿಯಾನದಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಬಂಡೀಪುರದಿಂದ ಬೀದರ್ವರೆಗೆ ಹಮ್ಮಿಕೊಂಡಿರುವ ಬೈಕ್ ಜಾಥಾವು ಶನಿವಾರ ತುಮಕೂರು ಮಾರ್ಗದಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿತು.

ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಪಿವಿಎಸ್ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮಾತನಾಡಿ, ಮದ್ಯಪಾನ ಮತ್ತು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಆ.29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ್ವರೆಗೆ ಮೂರು ದಿನಗಳ ಕಾಲ 1 ಸಾವಿರ ಕಿ.ಮೀ ಬೈಕ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ ಸಹಯೋಗದೊಂದಿಗೆ ಜಾಥಾ ನಡೆಸಲಾಗುತ್ತಿದ್ದು, 20ಕ್ಕೂ ಹೆಚ್ಚು ಬೈಕ್ ಸವಾರರು ಭಾಗವಹಿಸಿದ್ದು, ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

2020ರ ಮಿಸ್ಸಸ್ ಇಂಡಿಯಾ ವಿಜೇತೆ ರೇಣುಕಾ ಮಾತನಾಡಿ, ಯುವಕರು ದುಶ್ಚಟದಿಂದ ದೂರವಿರಬೇಕು ಹಾಗೂ ವ್ಯಾಯಾಮ ಹಾಗೂ ನಡಿಗೆಯಂತಹ ಅಭ್ಯಾಸ ರೂಡಿಸಿಕೊಳ್ಳಬೇಕು ಹಾಗೂ ನೆರೆಹೊರೆಯಲ್ಲಿ ಯಾರಾದರೂ ದುಶ್ಚಟಕ್ಕೆ ಒಳಗಾಗಿದ್ದರೆ ಪೋಲಿಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಅಭಿನವ್, ಎನ್ಎಸ್ಎಸ್ ರಾಜ್ಯ ಸಮಾಲೋಚಕ ಪ್ರತಾಪ್ ಲಿಂಗಯ್ಯ, ಪಿವಿಎಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಪಿ.ವಿ.ಶ್ರೀಧರ್ ಮೂರ್ತಿ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ