Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಶಾ ಮುಕ್ತ ಭಾರತ ಅಭಿಯಾನ ಮಾದಕ ವಸ್ತು ವಿರುದ್ಧ ಜಾಗೃತಿಗೆ ಚಿತ್ರದುರ್ಗದಲ್ಲಿ ಬೈಕ್ ಜಾಥಾ



ಚಿತ್ರದುರ್ಗ  ಆಗಸ್ಟ್ 30:

ನಶಾ ಮುಕ್ತ ಭಾರತ ಅಭಿಯಾನದಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಬಂಡೀಪುರದಿಂದ ಬೀದರ್ವರೆಗೆ ಹಮ್ಮಿಕೊಂಡಿರುವ ಬೈಕ್ ಜಾಥಾವು ಶನಿವಾರ ತುಮಕೂರು ಮಾರ್ಗದಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿತು.

ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಪಿವಿಎಸ್ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮಾತನಾಡಿ, ಮದ್ಯಪಾನ ಮತ್ತು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಆ.29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ್ವರೆಗೆ ಮೂರು ದಿನಗಳ ಕಾಲ 1 ಸಾವಿರ ಕಿ.ಮೀ ಬೈಕ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ ಸಹಯೋಗದೊಂದಿಗೆ ಜಾಥಾ ನಡೆಸಲಾಗುತ್ತಿದ್ದು, 20ಕ್ಕೂ ಹೆಚ್ಚು ಬೈಕ್ ಸವಾರರು ಭಾಗವಹಿಸಿದ್ದು, ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

2020ರ ಮಿಸ್ಸಸ್ ಇಂಡಿಯಾ ವಿಜೇತೆ ರೇಣುಕಾ ಮಾತನಾಡಿ, ಯುವಕರು ದುಶ್ಚಟದಿಂದ ದೂರವಿರಬೇಕು ಹಾಗೂ ವ್ಯಾಯಾಮ ಹಾಗೂ ನಡಿಗೆಯಂತಹ ಅಭ್ಯಾಸ ರೂಡಿಸಿಕೊಳ್ಳಬೇಕು ಹಾಗೂ ನೆರೆಹೊರೆಯಲ್ಲಿ ಯಾರಾದರೂ ದುಶ್ಚಟಕ್ಕೆ ಒಳಗಾಗಿದ್ದರೆ ಪೋಲಿಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಅಭಿನವ್, ಎನ್ಎಸ್ಎಸ್ ರಾಜ್ಯ ಸಮಾಲೋಚಕ ಪ್ರತಾಪ್ ಲಿಂಗಯ್ಯ, ಪಿವಿಎಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಪಿ.ವಿ.ಶ್ರೀಧರ್ ಮೂರ್ತಿ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ