Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಕರೆ

ಬಳ್ಳಾರಿ,ಜೂ.20
ಸಮಾಜದಲ್ಲಿ ಮಹಿಳೆಯರಿಗಿರುವ ಹಲವು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರಿನ ಒಂದೆಡೆ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಕ್ಕೆöÊ ಪದ್ಮಶಾಲಿ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ, ಯುಜಿ ಇಂಗ್ಲೀಷ್ ಶಿಕ್ಷಕರ ಸಂಘ ಹಾಗೂ ಇಂಗ್ಲೀಷ್ ಹಳೆಯ ವಿದ್ಯಾರ್ಥಿಗಳು ಜಂಟಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ‘ಬಾಡಿ ಆ್ಯಂಡ್ ಲಿಟ್‌ರೆಚರ್’ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರು, ದಲಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಗೌರವ, ಹಕ್ಕು ಸ್ವಾತಂತ್ರö್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಹಲವಾರು ನೈತಿಕ ವಿಚಾರಗಳ ಕುರಿತು ವಿದ್ಯಾರ್ಥಿಗಳು, ಸಂಶೋಧಕರು ಗಂಭೀರವಾಗಿ ಚಿಂತನೆ ನಡೆಸಿ, ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಹೇಳಿದರು.
ವಿವಿಯ ಕುಲಸಚಿವ ಪ್ರೊ.ವಿ.ಲೋಕೇಶ್, ಕಲಾ ನಿಕಾಯದ ಡೀನರಾದ ಪ್ರೊ ರಾಬರ್ಟ್ ಜೋಸ್, ಯುಜಿ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಬಸವರಾಜ್ ಟಿ.ಎಚ್ ವೇದಿಕೆಯಲ್ಲಿದ್ದರು.
ಇಂಗ್ಲೀಷ್ ಅಧ್ಯಯನ ವಿಭಾಗದ ಡಾ.ಸಂತೋಷ ಜಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ನಿಹಾರಿಕಾ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ವಾತ್ಸಲ್ಯ ಆರ್ ವಂದಿಸಿದರು.
ವಿವಿಧ ಕಾಲೇಜುಗಳ ಇಂಗ್ಲೀಷ್ ಪ್ರಾಧ್ಯಾಪಕರು ಸೇರಿದಂತೆ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಕನ್ನಡ, ಇಂಗ್ಲೀಷ್ ಮತ್ತು ನಾಟಕ ಹಾಗೂ ಪ್ರದರ್ಶನ ಕಲೆ ಅಧ್ಯಯನ ವಿಭಾಗದ ಎಲ್ಲ ಬೋಧಕ -ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಆಫ್‌ಲೈನ್ ಅರ್ಜಿ ಆಹ್ವಾನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಕರೆಟಿಬಿ ಡ್ಯಾಮಗೆ ಹೊಸ ಗೇಟಗಳ ಅಳವಡಿಕೆ ಕಾಮಗಾರಿ ಪೂರ್ಣ -- ಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವರಾದ ರಾಮಲಿಂಗಾರೆಡ್ಡಿ'ಕರ್ತವ್ಯ' ಆಪ್ ನೋಂದಣಿ - ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ ಶೇಕಡ 70.6 ರಷ್ಟು ಪ್ರಗತಿ ಸಾಧನೆತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ - ಸಾರ್ವಜನಿಕರಿಗೆ ಎಚ್ಚರಿಕೆ"ನಿಯತಕಾಲಿಕೆಗಳು ಜೂನ್ 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ ರೂ.10,000/- ದಂಡ ಎಲ್ಲಾ ಪ್ರಕಾಶಕರು ದಂಡದಿಂದ ಪಾರಾಗಲು ತಕ್ಷಣವೇ ಪ್ರೆಸ್ ಸೇವಾ ಪೋರ್ಟಲ್ ಮೂಲಕ ತಪ್ಪದೆ ವರದಿ ಸಲ್ಲಿಸಿಬೆಲ್ಲಿ ಫ್ಯಾಟ್ ಎಂಬ ಬೊಜ್ಜು ಹಾಗೂ ಅದರ ಮೂಲಕೊಪ್ಪಳ ಜಿಲ್ಲೆಯ ಇತಿಹಾಸದಲ್ಲೇ ಒಂದು ಸುವರ್ಣ ದಾಖಲೆಯಾದ ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿ