Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್’


ಬಳ್ಳಾರಿ,ಆ.16



ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯು ಅನುಕೂಲವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಹೇಳಿದರು.

ಬುಧವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಪಕ್ಕದಲ್ಲಿನ ರುಡ್‌ಸೆಟ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಬ್ಯಾಂಕ್ ಬೆಂಗಳೂರು ಪ್ರಧಾನ ಕಚೇರಿ ವತಿಯಿಂದ 78 ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಪ್ಯಾನ್ ಇಂಡಿಯಾ ಮೆಗಾ ಸಿಎಸ್‌ಆರ್ ಇನಿಶಿಯೇಟಿವ್ ಆಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆ’ ಪರಿಚಯಿಸಿದ್ದು, ಹೆಣ್ಣುಮಕ್ಕಳ ಶಿಕ್ಷಣವನ್ನು ಅರ್ಥಪೂರ್ಣ ಅಭಿವೃದ್ಧಿಗೆ ಮೂಲಭೂತ ಅಗತ್ಯವೆಂದು ಪ್ರಚಾರ ಮಾಡಿದ ಸಂಸ್ಥಾಪಕ ಅಮ್ಮೆಂಬಳ ಸುಬ್ಬಾರಾವ್ ಪೈ ಅವರಿಗೆ ಗೌರವಾರ್ಥವಾಗಿ “ಕೆನರಾ ವಿದ್ಯಾ ಜ್ಯೋತಿ” ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಕೆನರಾಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಡಿ.ವಿ.ಪಿ.ಆರ್.ಮುರಳಿಕೃಷ್ಣ ಅವರು ಮಾತನಾಡಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು 78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ' ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು.

2013-14 ರಲ್ಲಿ ಸಿಎಸ್‌ಆರ್ ಉಪಕ್ರಮಗಳ ಅಡಿ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ವಿಸ್ತರಿಸಲು ಪ್ರಾರಂಭಿಸಲಾಯಿತು. ಬರು ಬರುತ್ತಾ 2015-16 ರಿಂದ ಗ್ರಾಮೀಣ, ಅರೆ-ನಗರ ಮತ್ತು ನಗರ ಶಾಖೆಗಳ ಮೂಲಕ ವಿಸ್ತರಿಸಲಾಯಿತು ಎಂದರು.

ಕಳೆದ 11 ವರ್ಷಗಳಲ್ಲಿ 95 ಸಾವಿರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.46 ಕೋಟಿ ಮೊತ್ತದೊಂದಿಗೆ ವಿದ್ಯಾರ್ಥಿವೇತನ ಒದಗಿಸಲಾಗಿದೆ. 2023-24 ರವರೆಗೆ 44742 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ರೂ.18 ಕೋಟಿ ನೀಡಿದೆ. ಇದುವರೆಗೆ ಒಟ್ಟು 139742 ಪ್ರಯೋಜನ ಪಡೆದ ವಿದ್ಯಾರ್ಥಿಗಳು, ಒಟ್ಟು ರೂ.64 ಕೋಟಿ ವಿತರಿಸಿದ ಮೊತ್ತವಾಗಿದೆ ಎಂದು ತಿಳಿಸಿದರು.

ಯೋಜನೆಯ ವಿವರ:

ಕೆನರಾ ಬ್ಯಾಂಕ್ ಡಾ.ಅಂಬೇಡ್ಕರ್ ವಿದ್ಯಾ ಜ್ಯೋತಿ ಸ್ಕಾಲರ್‌ಶಿಪ್ ಯೋಜನೆಯಡಿ 2024-25ರ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವು ನೀಡಲಾಗುತ್ತಿದೆ ಮತ್ತು ಯೋಜನೆಯನ್ನು ಎಲ್ಲಾ ಗ್ರಾಮೀಣ, ಅರೆ-ನಗರ ಮತ್ತು ನಗರ ಶಾಖೆಗಳಲ್ಲಿ ಜಾರಿಗೊಳಿಸಲಾಗಿದೆ.

5, 6, 7, 8, 9 ಮತ್ತು 10 ನೇ ತರಗತಿಯಿಂದ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಂದ ತಲಾ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿವೇತನಕ್ಕಾಗಿ ಆಯಾ ವ್ಯಾಪ್ತಿಯ ಶಾಖೆಗಳು ಕಾರ್ಯ ಮಾಡುತ್ತವೆ.

ವಿದ್ಯಾರ್ಥಿವೇತನದ ಸಹಾಯವು 5, 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಪ್ರತಿ ವಿದ್ಯಾರ್ಥಿಗೆ ರೂ.3 ಸಾವಿರ ಮತ್ತು 8ನೇ, 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷಕ್ಕೆ ರೂ.5 ಸಾವಿರ ನೀಡಲಾಗುವುದು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ವೇದಾವತಿ, ಕೆನೆರಾ ಬ್ಯಾಂಕ್‌ನ ವ್ಯವಸ್ಥಾಪಕರು, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ