Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ ಸಿಇಓ ರಾಹುಲ್ ರತ್ನಂ ಪಾಂಡೇಯ

ಕೊಪ್ಪಳ ಮಾರ್ಚ್ 21 : ಬೇಸಿಗೆ ಆರಂಭವಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.

ಅವರು ಶುಕ್ರವಾರ ಕನಕಗಿರಿ ತಾಲೂಕಿನ ಹಿರೇಖೇಡಾ, ಮುಸಲಾಪುರ, ಚಿಕ್ಕಖೇಡಾ, ರಾಂಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಗ್ರಾಮಗಳ ಬೋರವೆಲಗಳ ಪರಿಶೀಲನೆ ನಡೆಸಿದ ಅವರು ಬೇಸಿಗೆ ಹಿನ್ನೆಲೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಕ್ರಮವಹಿಸಬೇಕು. ಆಯಾ ಗ್ರಾಮ ಪಂಚಾಯತಿ ಪಿಡಿಓಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸರಿಯಾಗಿ ಕುಡಿಯುವ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಇದೇ ವೇಳೆ ಮುಸಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪುರ ಕೆರೆಗೆ ಭೇಟಿ ನೀಡಿ ಕೆರೆಯು ಸಂಪೂರ್ಣ ಭತ್ತಿರುವುದನ್ನು ಕಂಡು, ಕೆರೆಗೆ ನೀರು ತುಂಬಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕೆರೆಗೆ ನೀರು ತುಂಬಿಸಲು ಹೇಳಿದರು.

ಈ ಸಂದರ್ಭದಲ್ಲಿ ಕನಕಗಿರಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ದೇವಣ್ಣ ಕಟ್ಟಿ. ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಯು. ಮಲ್ಲಿಕಾರ್ಜುನ್. ನಾಗೇಶ ಎಚ್. ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ