Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಬೆಂಗಳೂರು, 17 : ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಹಾಗೂ ಬಿಡಿಎಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆದಿದ್ದು, ಬೆಂಗಳೂರಿನ ಸಂಚಾರ ದಟ್ಟಣೆ ಪೆರಿಪೆರಲ್ ರಿಂಗ್ ರಸ್ತೆ, ಸೈಡರ್ ಪಾದಚಾರಿ ಮಾರ್ಗಗಳ ಆಧುನೀಕರಣ, ಮಳೆ ನೀರು ಕೊಯ್ದು, ಬೆಂಗಳೂರಿನ ಹಸಿರೀಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಮಾರ್ಗೋಪಾಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಬೆಂಗಳೂರನ್ನು ಅಭಿವೃದ್ಧಿ ಪಡಿಸುವ ಚರ್ಚೆಯೂ ನಡೆಯಿತು. ಸಭೆಯ ಆರಂಭದಲ್ಲಿ ಬೆಂಗಳೂರಿನ
ಸಮಸ್ಯೆಗಳು, ಅವುಗಳ ಪರಿಹಾರದ ಬಗ್ಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ವಿವರಗಳನ್ನು ನೀಡಿದರು.ಇಂದಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ,ಕೆ.ಜೆ ಜಾರ್ಜ್, ದಿನೇಶ್‌ ಗುಂಡೂರಾವ್,ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿಮುಖ್ಯಕಾರ್ಯದರ್ಶಿ ಉಮಾಶಂಕರ್,ಇಲಾಖೆ ಎಲ್.ಕೆ ಅತೀಕ್,ಅಪರ ಇಂಧನ ಹಾಗೂ ಮೂಲಸೌಕರ್ಯ ಇಲಾಖೆ ಅಪರಮುಖ್ಯಕಾರ್ಯದರ್ಶಿ ಗೌರವ್‌ಗುಪ್ತ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್,ಬಿಡಿಎಆಯುಕ್ತ ಜಯರಾಂ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ