Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ


ಅಹವಾಲು-ಸಮಸ್ಯೆಗಳಿಗೆ ತ್ವರಿತ ಪರಿಹಾರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ



ಬೆಳಗಾವಿ ಜೂ.26ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತ್ವರಿತವಾಗಿ ಸ್ಪಂಧಿಸುವದರ ಮೂಲಕ ಸಮಸ್ಯಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸೂಚನೆ ನೀಡಿದರು.



ಚಿಕ್ಕೋಡಿ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಬುಧವಾರ (ಜೂ.೨೬) ಜರುಗಿದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂಧನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದು ಹಾಗೂ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ನಿಟ್ಟಿನಲ್ಲಿ ಸಂಬ0ಧಿಸಿದ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವದರ ಮೂಲಕ ಸಮಸ್ಯೆಗಳ ನಿವಾರಣಗೆ ಮುಂದಾಗಬೇಕು.

ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಡಿ ದಾಖಲಾಗುವ ಸಾರ್ವಜನಿಕ ಅಹವಾಲುಗಳಿಗೆ ಸಂಬ0ಧಿಸಿದ ಇಲಾಖಾ ಅಧಿಕಾರಿಗಳು ಕಾಲಮಿತಿಯೊಳಗಾಗಿಯೇ ಇತ್ಯರ್ಥ ಪಡಿಸಬೇಕು. ಜನಸ್ಪಂಧನ ಕಾರ್ಯಕ್ರಮದಡಿ ಸ್ವೀಕೃತವಾಗುವ ಅಹವಾಲುಗಳ ಕುರಿತು ಯಾವುದೇ ರೀತಿಯ ಉದಾಸಿನತೆ, ನಿರ್ಲಕ್ಷö್ಯ ಮನೋಭಾವ ತೋರದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕಟ್ಟುನಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಸಿ.ಇ.ಓ. ರಾಹುಲ ಶಿಂಧೆ, ಚಿಕ್ಕೋಡಿ ತಹಶೀಲ್ದಾರ ಚಿದಂಬರ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಜನಸ್ಪಂದನ ಕಾರ್ಯಕ್ರಮದಡಿ ರಸ್ತೆ, ಚರಂಡಿ, ಬೆಳೆವಿಮೆ, ಪಹಣಿ ಪತ್ರ ತಿದ್ದುಪಡಿ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸಾರ್ವಜನಿಕರಿಂದ ಸ್ವೀಕರಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ