Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡುತಿನಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ – 50 ಪೌರ ಕಾರ್ಮಿಕರಿಗೆ ಸನ್ಮಾನ

ಬಳ್ಳಾರಿ: ಬೇರು ಭೂಮಿ ತಂಡದ ವತಿಯಿಂದ ಮತ್ತು ಆದ್ಯ ಟ್ರಸ್ಟ್ ಸಹಯೋಗದೊಂದಿಗೆ ಕುಡುತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು.ಊರಿನ ಸ್ವಚ್ಛತೆ ಪರಿಸರದ ಆರೋಗ್ಯ ಮತ್ತು ಸಾರ್ವಜನಿಕರ ಸುಖಸಮೃದ್ಧಿಗಾಗಿ ದಿನನಿತ್ಯವೂ ದುಡಿಯುತ್ತಿರುವ ಪೌರ ಕಾರ್ಮಿಕರ ಪರಿಶ್ರಮವನ್ನು ಗುರುತಿಸುವ ಹಿತದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಈ ಸಂದರ್ಭದಲ್ಲಿ ಒಟ್ಟು 50 ಪೌರ ಕಾರ್ಮಿಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು ನೆನಪಿನ ಕಾಣಿಕೆಯಾಗಿ ಪ್ರತಿಯೊಬ್ಬರಿಗೆ ಅವರ ವೈಯಕ್ತಿಕ ಫೋಟೋ ಹಾಗೂ ಹಣ್ಣು ನೀಡಿ ಗೌರವಿಸಲಾಯಿತುಕಾರ್ಯಕ್ರಮದಲ್ಲಿ ಮಾತನಾಡಿದ ಆಯೋಜಕರು
ಪೌರ ಕಾರ್ಮಿಕರು ನಮ್ಮ ನಿಜವಾದ ಹೀರೋಗಳು ಅವರ ಶ್ರಮವಿಲ್ಲದೆ ಸ್ವಚ್ಛ ನಗರ ಆರೋಗ್ಯಕರ ಪರಿಸರ ಸಾಧ್ಯವಿಲ್ಲ ಅವರ ಸೇವಾಭಾವ ಸಮಾಜಕ್ಕೆ ಮಾದರಿಯಾಗಿದೆ ಇಂತಹ ಕಾರ್ಯಕ್ರಮಗಳ ಮೂಲಕ ಅವರ ಪರಿಶ್ರಮವನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರುಹಾಜರಿದ್ದ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಗಣ್ಯರು ಪೌರ ಕಾರ್ಮಿಕರ ಸೇವಾಭಾವವನ್ನು ಶ್ಲಾಘಿಸಿ ಭವಿಷ್ಯದಲ್ಲಿಯೂ ಇಂತಹ ಸನ್ಮಾನ ಕಾರ್ಯಕ್ರಮಗಳನ್ನು ಮುಂದುವರಿಸಬೇಕೆಂದು ಅಭಿಪ್ರಾಯಪಟ್ಟರು ಈ ಕಾರ್ಯಕ್ರಮದಲ್ಲಿಬೇರು ಭೂಮಿ ತಂಡ ಆದ್ಯ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ