Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಪುರಸಭೆ: ಆಸ್ತಿ ತೆರಿಗೆ ಪಾವತಿಸಲು ಸೂಚನೆ


ಬಳ್ಳಾರಿ,ಫೆ.14:



ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡ, ನಿವೇಶನ ಹೊಂದಿರುವ ಆಸ್ತಿ ಮಾಲೀಕರು ಕಡ್ಡಾಯವಾಗಿ ತಮ್ಮ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ, ಅರೆ ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ ಸ್ವತ್ತುಗಳನ್ನು ಹೊರತುಪಡಿಸಿ ಇನ್ನುಳಿದ ಕಟ್ಟಡ, ನಿವೇಶನಗಳ ಮಾಲೀಕರು ತಮ್ಮ ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಬೇಕು

ಸಂಬoಧಿಸಿದ ಪೂರಕ ನೋಂದಾಯಿತ ದಾಖಲೆ ಪತ್ರಗಳು, ಸ್ವತ್ತಿನ ಭಾವಚಿತ್ರ, ಮಾಲೀಕರ ಫೋಟೋ, ನಮೂನೆ-15, ವಿದ್ಯುತ್ ಬಿಲ್, ಕುಡಿಯುವ ನೀರಿನ ಬಿಲ್, ಕಟ್ಟಡ ಪರವಾನಗಿ ಮತ್ತು ಅನುಮೋದಿತ ನಕ್ಷೆ, ನಿವೇಶನ ವಿನ್ಯಾಸ ಅನುಮೋದನೆ ಅಥವಾ ಅನುಮೋದಿತ ಬಡಾವಣೆಯ ನಕ್ಷೆ, ಆರ್‌ಟಿಸಿ, ಮ್ಯೂಟೇಶನ್ ನಕಲು ಪ್ರತಿ, ಮಾಲೀಕರ ಆಧಾರ್ ಕಾರ್ಡ್ ಪ್ರತಿ, ಮಾಲೀಕರ ಪಾನ್ ಕಾರ್ಡ್ ಪ್ರತಿ ಅಥವಾ ಚುನಾವಣಾ ಗುರುತಿನ ಚೀಟಿ ಹಾಗೂ ಇತರೆ ಅವಶ್ಯಕ ದಾಖಲಾತಿಗಳನ್ನು ಪುರಸಭೆ ಕಚೇರಿಗೆ ಸಲ್ಲಿಸಿ ಸ್ವತ್ತಿಗೆ ಸಂಬAಧಪಟ್ಟ ತೆರಿಗೆ ಪಾವತಿಸಬೇಕು.

ಆಸ್ತಿಯನ್ನು ಗಣಕೀಕರಿಸಿಕೊಂಡು ನಮೂನೆ-3, ನಮೂನೆ-3ಎ ಪಡೆದುಕೊಂಡು ನೋಂದಾಯಿತ ಕಚೇರಿಯಲ್ಲಿ ಕ್ರಯ ಪತ್ರ, ದಾನ ಪತ್ರ, ವಿಭಾಗ ಪತ್ರ ಹಕ್ಕು, ಖುಲಾಸೆ ಹಾಗೂ ಇತರೆ ದಾಖಲೆ ಪತ್ರ ನೋಂದಣಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಬಹುದು.

ತಪ್ಪಿದಲ್ಲಿ ಸಂಬAಧಪಟ್ಟ ಆಸ್ತಿ ಮಾಲೀಕರುಗಳಿಗೆ ನಿಯಮ 10ಎ ರಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳ ಕಚೇರಿ, ಕಂದಾಯ ಶಾಖೆಯ ಕಂದಾಯ ಅಧಿಕಾರಿ ಅಥವಾ ಮೊ.9886362003, 9916907008, 9845509950 ಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ