ವಿಜಯನಗರವಾಣಿ ಸುದ್ದಿ
ಬಳ್ಳಾರಿ : ಉಪ್ಪಾರ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಬಳ್ಳಾರಿ ಜಿಲ್ಲಾ ಭಗೀರಥ ಸಂಘದ ಜಿಲ್ಲಾದ್ಯಕ್ಷ ಕೊಳಗಲ್ ಎರ್ರಿ ಸ್ವಾಮಿ
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕೆಜೊತೆ ಮಾತನಾಡಿದ ಅವರು ಪ್ರಸ್ತುತ ವಿಧಾನಸಭೆಯಲ್ಲಿ ಉಪ್ಪಾರ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಯಾವುದೇ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮುದಾಯಕ್ಕೆ ನ್ಯಾಯ ಒದಗಿಸಲು ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ. ಸತತ ನಾಲ್ಕುಬಾರಿ ಆಯ್ಕೆಯಾಗಿರುವ ಚಾಮರಾಜನಗರದ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಈ ಭಾರಿ ಸಚಿವ ಸ್ಥಾನನೀಡಬೆಕೆಂದು ರಾಜ್ಯ ಸಾರ್ಕರಕ್ಕೆ ಆಗ್ರಹಿಸಿದರು.

