Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗ್ಯೂ: ಮನೆ ಒಳಾಂಗಣದಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸಿ


ಬಳ್ಳಾರಿ,ಜು.18



ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಮನೆ ಒಳಗಿನ ಫ್ರಿಜ್, ಎರ್ಕೂಲರ್, ಅಲಂಕೃತ ಗಿಡಗಳ ಕುಂಡಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಡೆಂಗ್ಯು ಹರಡದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಈಡಿಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಡೆಂಗ್ಯು ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲವಾದರೂ ಸಹ ಲಕ್ಷಣಗಳಾಧರಿಸಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಹೊರತಾಗಿ ಸಾರ್ವಜನಿಕರು ಮನೆಯ ಒಳಗೆ ಸೊಳ್ಳೆ ಉತ್ಪತ್ತಿಯಾಗುವಂತಹ ಫ್ರಿಜ್ನ ಹಿಂಭಾಗ, ಅಲಂಕೃತವಾಗಿ ಬಳಸುವ ಮನಿಪ್ಲಾಂಟ್ ಕುಂಡಗಳು (ಬಾಟಲ್), ಸ್ನಾನಗೃಹದಲ್ಲಿ ಮುಚ್ಚಳ ಮುಚ್ಚಲು ಸಾಧ್ಯವಿಲ್ಲದ ಸಿಮೆಂಟ್ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರು ಖಾಲಿ ಮಾಡಬೇಕು ಎಂದು ಹೇಳಿದ್ದಾರೆ.

ಶಿಕ್ಷಕರು ಶಾಲೆ, ಅಂಗನವಾಡಿಗಳಲ್ಲಿ ಪ್ರಾರ್ಥನೆ ವೇಳೆ ಮಕ್ಕಳಿಗೆ ತಮ್ಮ ಮನೆಯಲ್ಲಿ ನೀರು ಸಂಗ್ರಹಾರಕಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಿ ನೀರು ತುಂಬಿದ ನಂತರ ಮುಚ್ಚಳ ಮುಚ್ಚುವಂತೆ ಪಾಲಕರ ಮನವೊಲಿಸಲು ತಿಳಿಸಬೇಕು. ಲಾರ್ವಾ ಪತ್ತೆ ಹಚ್ಚಿ ಮಾಹಿತಿ ತಿಳಿಸಿದ ವಿದ್ಯಾರ್ಥಿಗಳಿಗೆ ಎಲ್ಲರ ಸಮ್ಮುಖದಲ್ಲಿ ಪ್ರಶಂಸಿಸಬೇಕು ಎಂದು ಅವರು ಕೋರಿದ್ದಾರೆ.

ವಾರದಲ್ಲಿ ಒಂದು ದಿನ ಶುಕ್ರವಾರದಂದು ಡೆಂಗ್ಯು ರೋಗ ಹರಡುವ ಈಡಿಸ್ ಸೊಳ್ಳೆ ನಿರ್ಮೂಲನಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಂಬಲದೊಂದಿಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳ ಸಮನ್ವಯದೊಂದಿಗೆ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಗ್ರಾಮ, ವಾರ್ಡ್ಗಳಿಗೆ ಸಿಬ್ಬಂದಿಯವರೊಂದಿಗೆ ಭೇಟಿ ನೀಡಿದಾದ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ