Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಂತ ವೆಚ್ಚದಲ್ಲಿ ಅಂಗನವಾಡಿಗಳಿಗೆ ಹಣ್ಣಿನ ಗಿಡಗಳ ವಿತರಣೆ


ಕಾರವಾರ. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉತ್ತಮ ಗುಣಮಟ್ಟದ ಹಣ್ಣು ಹಾಗೂ ತೆಂಗಿನಕಾಯಿ ಸಿಗಲಿ ಎಂಬ ಉದ್ದೇಶದಿಂದ ಹಾಗೂ ಪರಿಸರ ಕಾಳಜಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್ ತಮ್ಮ ಸ್ವಂತ ವೆಚ್ಚದಲ್ಲಿ ಮಾವಿನ ಗಿಡ ಮತ್ತು ತೆಂಗಿನ ಗಿಡಗಳನ್ನು ವಿತರಿಸಿದ್ದಾರೆ.



ಭಾನುವಾರ ಅಂಕೋಲಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ 35 ಅಂಗನವಾಡಿಗಳಿಗೆ ತೆಂಗಿನ ಮತ್ತು ಮಾವಿನ ಗಿಡಗಳನ್ನು ವಿತರಿಸಿದರು.

ಅಂಗನವಾಡಿಯ ಮಕ್ಕಳಿಗಾಗಿಯೇ ವಿಶೇಷವಾಗಿ ಉತ್ತಮ ಗುಣಮಟ್ಟದ ಮಾವಿನ ಗಿಡಗಳನ್ನು ಹಳಿಯಾಳದಿಂದ ಹಾಗೂ ಉತ್ತಮ ಗುಣಮಟ್ಟದ ತೆಂಗಿನ ಗಿಡಗಳನ್ನು ಅಂಕೋಲಾದಿ0ದ ಸ್ವಂತ ವೆಚ್ಚದಲ್ಲಿ ಖರೀದಿಸಿ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಿದ ಅವರು, ಈ ಗಿಡಗಳನ್ನು ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಿ, ಇವುಗಳ ಫಲಗಳನ್ನು ಮಕ್ಕಳಿಗೆ ಒದಗಿಸಬೇಕು ಎಂದು ಕೋರಿದರು.



ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ್ ಗೌಡ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್ ಅಧ್ಯಕ್ಷತೆ ವಹಿಸಿದ್ದರು.



ಅಂಕೋಲಾ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ ಜಿ ಭಟ್, ಅಂಕೋಲಾ ತಾಲೂಕಿನ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತರು ಹಾಗೂ ಸಹಾಯಕರು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ