Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಜಿಲ್ಲೆಯ ಪ್ರವಾಹ ಪರಿಸ್ಥಿತಿ : ಪರಿಹಾರ ಪ್ರಕ್ರಿಯೆ*

ಶಿವಮೊಗ್ಗ, ಜುಲೈ 22, ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ.

ಜುಲೈ ಮಾಹೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಪರಿಹಾರ ಕ್ರಮಗಳು ಪ್ರಗತಿಯಲ್ಲಿವೆ.

ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಹೊಸನಗರ ತಾಲ್ಲೂಕಿನ ಬೈಸೆ ಗ್ರಾಮದ ಶಶಿಕಲಾ, ತೀರ್ಥಹಳ್ಳಿ ತಾಲ್ಲೂಕಿನ ಬಿದರಗೋಡು ಗ್ರಾಮದ ನಾಗೇಂದ್ರ ಹಾಗೂ ಶಿಕಾರಿಪುರ ತಾಲ್ಲೂಕಿನ ಅಮಟೇಕೊಪ್ಪ ಗ್ರಾಮದ ನಾಗರಾಜ ಮರಣ ಹೊಂದಿರುತ್ತಾರೆ. ಶಶಿಕಲಾ ಮತ್ತು ನಾಗೇಂದ್ರ ಕುಟುಂಬದವರಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ತಲಾ ರೂ.5 ಲಕ್ಷ ಪರಿಹಾರ ನೀಡಲಾಗಿರುತ್ತದೆ. ನಾಗರಾಜ ರವರ ಕುಟುಂಬಕ್ಕೆ ಎಫ್ಎಲ್ಸಿ ವರದಿ ಬಂದ ನಂತರ ಪರಿಹಾರ ವಿತರಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಜುಲೈ 19 ರವರೆಗೆ ಒಟ್ಟು 6 ಜಾನುವಾರು ಮೃತಪಟ್ಟಿದ್ದು ಪರಿಹಾರಕ್ಕೆ ಕ್ರಮ ವಹಿಸಲಾಗುತ್ತಿದೆ. ಅತಿ ಹೆಚ್ಚು ಮಳೆಯಿಂದ ಜೂನ್ವರೆಗೆ ಸುಮಾರು 7 ಮನೆ ಪೂರ್ಣ ಹಾನಿಗೊಳಪಟ್ಟಿದ್ದು ಅದರಲ್ಲಿ 4 ಮನೆಗಳಿಗೆ ತಲಾ ರೂ.1.20 ಲಕ್ಷ ನೀಡಲಾಗಿದೆ. 130 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು ಪರಿಹಾರ ನೀಡಲು ಕ್ರಮ ವಹಿಸಲಾಗಿದೆ.

ಜಿಲ್ಲೆಯಲ್ಲಿ ಸುಮಾರು 74916 ಹೆ. ಭತ್ತದ ಪ್ರದೇಶದಲ್ಲಿ 9508 ಹೆ ಬಿತ್ತನೆಯಾಗಿದೆ. ಬಿತ್ತನೆಯಾದ ಪ್ರದೇಶದಲ್ಲಿ ಸಾಗರ ತಾಲ್ಲೂಕಿನ ತಾಳಗುಪ್ಪ 500 ಹೆ, ಕಸಬಾ 20 ಹೆ, ಆನಂದಪುರ 10 ಹೆ, ಸೊರಬ ತಾಲ್ಲೂಕಿನ ಅಬಸೇ, ಕಡಸೂರು ಗ್ರಾಮಗಳು ಸೇರಿ ಒಟ್ಟು 610 ಹೆ.ಪ್ರದೇಶ ಜಲಾವೃತಗೊಂಡಿರುತ್ತದೆ. ಜಂಟಿ ಸಮೀಕ್ಷೆ ನಂತರ ಹಾನಿ ಪ್ರಮಾಣವನ್ನು ಅಂದಾಜಿಸಲಾಗುವುದು. ಮತ್ತು 47000 ಹೆಕ್ಟೇರ್ ಪ್ರದೇಶದಲ್ಲಿ 43345 ಹೆ.ಬಿತ್ತನೆಯಾಗಿದ್ದು ಈವರೆಗೆ ಯಾವುದೇ ಹಾನಿಯಾಗಿರುವುದಿಲ್ಲ.

ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ 767 ವಿದ್ಯುತ್ ಕಂಬಗಳು ಹಾನಿಯಾಗಿದೆ ಹಾಗೂ 16 ಟ್ರಾನ್ಸ್ಫಾರ್ಮರ್ಗಳು ಹಾನಿಯಾಗಿಯಾಗಿರುತ್ತವೆ.

ಪ್ರವಾಹದಿಂದ 24.92 ಕಿ.ಮೀ ರಾಜ್ಯ ಹೆದ್ದಾರಿ, 42.13 ಕಿ.ಮೀ ಜಿಲ್ಲೆಯ ಮುಖ್ಯ ರಸ್ತೆ, 421.00 ಕಿ.ಮೀ ಗ್ರಾಮೀಣ ರಸ್ತೆ ಹಾನಿಯಾಗಿರುತ್ತದೆ. ಜಿಲ್ಲೆಯಲ್ಲಿ ಪ್ರವಾಹದಿಂದಾಗಿ 110 ಸೇತುವೆಗಳು ಹಾನಿಯಾಗಿರುತ್ತದೆ. 143 ಶಾಲಾ ಕಟ್ಟಡಗಳು, 118 ಅಂಗನವಾಡಿ ಕಟ್ಟಡಗಳು ಹಾಗೂ 09 ಆರೋಗ್ಯ ಕೇಂದ್ರಳು ಹಾನಿಗೊಳಗಾಗಿರುತ್ತವೆ. ಜಿಲ್ಲೆಯಲ್ಲಿ ಪ್ರವಾಹದಿಂದ 64 ಕೆರೆಗಳು ಹಾನಿಗೊಳಗಾಗಿರುತ್ತವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ