Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆ

----
ಕೊಪ್ಪಳ ಜುಲೈ 04 ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳ ವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ ಅಗತ್ಯ ಕ್ರೀಯಾಯೋಜನೆ ರೂಪಿಸಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಯ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ (ಜು. 3ರಂದು) ಯಲಬುರ್ಗಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಪ್ರಸ್ತುತ ಮಳೆಯ ಕೊರತೆಯಿಂದಾಗಿ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಬೆಳೆ ಹಾನಿ ಎಷ್ಟಾಗಬಹುದು ಎಂಬ ವಿವರವನ್ನು ಹೆಕ್ಟರ್ ವಾರು ಸಂಗ್ರಹಿಸಿ, ಆ ಬೆಳೆ ನಷ್ಟಕ್ಕೆ ಎಷ್ಟು ಕೋಟಿ ರೂಪಾಯಿ ಪರಿಹಾರವನ್ನು ಒದಗಿಸಬೇಕಾಗುತ್ತದೆ. ಇದಕ್ಕೆ ಇನ್ಸೂರೆಸ್ ಎಷ್ಟು ಪಾವತಿಯಾಗಬಹುದು ಎಂಬ ಬೇರೆ ಬೇರೆ ವಿಷಯಗಳನ್ನು ಕ್ರೀಯಾ ಯೋಜನೆಯಲ್ಲಿ ಸೇರಿಸಿ ಸಲ್ಲಿಸಬೇಕೆಂದರು.
ಡಿಬಿಓಟಿ ಯೋಜನೆಗೆ ಸಂಬಂಧಿಸಿದಂತೆ ಮೇಲ್ಮಟ್ಟದ ಜಲಾಗಾರಗಳಲ್ಲಿ ನೀರಿರುತ್ತದೆ. ಆ ನೀರು ಪೈಪ್‌ಲೈನ್ ಮೂಲಕ ಹಳ್ಳಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇದ್ದಕ್ಕೆ ಕಾರಣ ಜೆಜೆಎಂ ಕಾಮಗಾರಿಗಳು ಸರಿಯಾದ ರೀತಿಯಲ್ಲಿ ಕೈಗೊಳ್ಳದಿರುವುದಾಗಿದೆ. ಹಾಗಾಗಿ ಯಾವ ಯಾವ ಪ್ರದೇಶಗಳಲ್ಲಿ ಜೆಜೆಎಂ ಕಾಮಗಾರಿಗಳು ಕಳಪೆಯಾಗಿವೆ. ಅವುಗಳನ್ನು ಗುರುತಿಸಿ, ಕುಡಿಯುವ ನೀರಿನ ಪೈಪ್‌ಲೈನ್ ಸರಿಪಡಿಸಿ, ಎಲ್ಲಾ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡಬೇಕು. ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳ ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿಗಳ ತಹಶೀಲ್ದಾರರು, ತಾ.ಪಂ ಇಓ.ಗಳು, ಪ.ಪಂ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವನಿಧಿ ಫಲಾನುಭವಿಗಳ ಸ್ವಯಂ ಘೋಷಣೆ ಕಡ್ಡಾಯಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ವಕ್ಫ್ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ವಕ್ಫ್ ಅಧಿಕಾರಿ ಸೂಚನೆಬಳ್ಳಾರಿಯಲ್ಲಿ ವನಮಹೋತ್ಸವ ಅಂಗವಾಗಿ ‘ಗ್ರೀನ್ ಮಾರ್ಚ್’ ಪರಿಸರ ಕಾಳಜಿ ಕೇವಲ ಒಂದು ದಿನಕ್ಕೆ ಸೀಮಿತ ಬೇಡ: ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ ಕೋಟ್ಯಾಳದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ ಸಿಎಸ್ ಆರ್ ಅನುದಾನದಡಿ ಉನ್ನತೀಕರಿಸಿದ ಪ್ರೌಢ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಮಳೆಗಾಲದಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಆದ್ಯತೆ ನೀಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ: ಮುಂಗಾರು ಬೆಳೆಗೆ ನೀರಿಲ್ಲ, ಕುಡಿಯಲು ಮಾತ್ರ ಬಳಕೆಅಂಜನಾದ್ರಿ, ಆನೆಗುಂದಿಯ ವಿವಿಧ ಪ್ರವಾಸಿ ತಾಣಗಳಿಗೆ ಯುರೋಪ್ ದೇಶಗಳ ಕಂಟೆಂಟ್ ಕ್ರಿಯೇಟರ್ಸ್ & ಇನ್ ಫ್ಲೂಯನ್ಸರ್ಸ್ ಭೇಟಿಬಳ್ಳಾರಿ: ಗ್ರಾಮ ಒನ್ ಕೇಂದ್ರದಲ್ಲಿ ಖಾಲಿ ಇರುವ ಫ್ರಾಂಚೈಸಿ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನಸರ್ಕಾರಿ ಆದರ್ಶ ವಿದ್ಯಾಲಯ: 7, 8 ಮತ್ತು 9ನೇ ತರಗತಿಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ಜುಲೈ 6, 7 ಕ್ಕೆ ದಾಖಲಾತಿ