Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಶಿವಮೊಗ್ಗ, ಆ.14, 

ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ದೂರುದಾರರಾದ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ ಶಾಖೆ, ಶಂಕರ ವಲಯ, ಶಿವಮೊಗ್ಗ ಇವರು ದೂರು ನೀಡಿದ ಅನ್ವಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಈ ಪ್ರಕರಣವನ್ನು ಎಲ್‌ಜಿಸಿ(ಸಿ) ಸಂಖ್ಯೆ 1726/2019 ಎಂದು ದಾಖಲಿಸಿಕೊಂಡು ಸಂಪೂರ್ಣ ಸಾಕ್ಷö್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿಯು ಅರಣ್ಯ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10,000/- ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 03 ತಿಂಗಳ ಸಾದಾ ಶಿಕ್ಷೆಯನ್ನು 02ನೇ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯರಾದ ಕೆ.ಹೆಚ್.ಅಶ್ವತ್ಥ ನಾರಾಯಣಗೌಡ ಇವರು ಇದ್ದ ಪೀಠವು ದಿ: 11-07-2024 ರಂದು ತೀರ್ಪು ನೀಡಿರುತ್ತದೆ.

ಆರೋಪಿತರು ಒತ್ತುವರಿ ಮಾಡಿಕೊಂಡ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸುವಂತೆ ಆದೇಶಿಸಿ, 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ, ಶಾಖೆ, ಶಂಕರ ವಲಯ ಇವರಿಗೆ ನಿರ್ದೇಶಿಸಿ ತೀರ್ಪನ್ನು ನೀಡಿರುತ್ತದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ