Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ

ಚಿತ್ರದುರ್ಗಜುಲೈ.04:

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ “ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ”ವನ್ನು ಜುಲೈ ತಿಂಗಳ ಕೊನೆಯ ವಾರದಲ್ಲಿ ಚಿತ್ರದುರ್ಗದಲ್ಲಿ ಸಂಘಟಿಸಲು ಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿಗಳ ಕುರಿತು ಮಾಹಿತಿಯನ್ನು ನೀಡಲಾಗುವುದು. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಾಗಿರಬೇಕು ಹಾಗೂ ಓದಲು, ಬರೆಯಲು ಬರಬೇಕು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 2 ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಸಂಪರ್ಕಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಮಾಹಿತಿಗಾಗಿ ಸಿಡಾಕ್ ತರಬೇತುದಾರ ಪಿ.ವಿಜಯ್ ಕುಮಾರ್ ಮೊಬೈಲ್ ನಂಬರ್ 7760270058 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ  

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ