Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಎಸ್‌ಐಸಿ ವಿಶೇಷ ಯೋಜನೆ: ಜ.31ರವರೆಗೆ ನೋಂದಣಿ ಅವಕಾಶ

ಬಳ್ಳಾರಿ,ಜ.29
ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‌ಐಸಿ) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯಡಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನೋಂದಾಯಿಕೊಳ್ಳಲು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಯುವರಾಜ ಎಸ್.ವಿ ಅವರು ತಿಳಿಸಿದ್ದಾರೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆಯು ಕಾರ್ಮಿಕರ ರಾಜ್ಯ ವಿಮಾ ನಿಗಮವು ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದಿಸಿದ ಒಂದು ವಿಶೇಷ ಉಪಕ್ರಮವಾಗಿದ್ದು, ಇದರಡಿ ನೋಂದಾಯಿಸಿಕೊಳ್ಳಲು 31ನೇ ಡಿಸೆಂಬರ್ 2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.
ಗುತ್ತಿಗೆ ಹಾಗೂ ತಾತ್ಕಾಲಿಕ ಕಾರ್ಮಿಕರು ಸೇರಿದಂತೆ ಇಎಸ್‌ಇ ಅಡಿ ಇನ್ನು ನೋಂದಣಿಯಾಗದ ಉದ್ಯೋಗದಾತರು ಮತ್ತು ಉದ್ಯೋಗಿಗಳು ಯಾವುದೇ ಪರಿಶೀಲನೆ ಅಥವಾ ಹಿಂದಿನ ಅವಧಿಯ ಯಾವುದೇ ಬಾಕಿಯ ಬೇಡಿಕೆ ಇಲ್ಲದೇ ನೋಂದಾಯಿಸಿಕೊಳ್ಳಲು ಇರುವ ಅವಧಿಯನ್ನು ಜ.31 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದ್ಯೋಗದಾತರು ತಮ್ಮ ಘಟಕಗಳು ಮತ್ತು ಉದ್ಯೋಗಿಗಳನ್ನು ಇಎಸ್‌ಐಸಿ ಪೋರ್ಟಲ್, ಶ್ರಮ್ ಸುವಿಧಾ ಮತ್ತು ಎಂಸಿಎ ಪೋರ್ಟಲ್ ಮೂಲಕ ಡಿಜಿಟಲ್ ರೂಪದಲ್ಲಿ ನೋಂದಾಯಿಸಿಕೊಳ್ಳಬಹುದು.
ಈ ಯೋಜನೆಯಿಂದ ಕಾರ್ಮಿಕರ ರಾಜ್ಯ ವಿಮಾ ನಿಗಮದ ಒಂದು ಪ್ರಗತಿಪರ ಹೆಜ್ಜೆಯಾಗಿದ್ದು, ಸರಳ ಮತ್ತು ಹಿಂದಿನ ಅವಧಿಯ ಬಾಕಿಯ ಬೇಡಿಕೆಯಿಲ್ಲದೆ ನೋಂದಣಿಗೆ ಸುಲಭವಾಗಿ ಸಾಮಾಜಿಕ ಭದ್ರತೆಗೆ ಒಳಪಡುವ ಯೋಜನೆಯಾಗಿದೆ.
ಉದ್ಯೋಗದಾತರು ಕೇವಲ ತಮ್ಮ ಕಾರ್ಯಪಡೆಯ ಕ್ರಮಬದ್ಧಗೊಳಿಸುವಿಕೆಯನ್ನು ಪ್ರೋತ್ಸಾಹಿಸುವುದಲ್ಲದೇ, ಇನ್ನೂ ಹೆಚ್ಚಿನ ಕಾರ್ಮಿಕರನ್ನು ವಿಶೇಷವಾಗಿ ಗುತ್ತಿಗೆ ವಲಯದ ಕಾರ್ಮಿಕರು ಇಎಸ್‌ಐ ಕಾಯ್ದೆಯಡಿ ದೊರೆಯುವ ಅಗತ್ಯ ಆರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವುದನ್ನು ಉತ್ತೇಜಿಸುತ್ತದೆ. ಇದರೊಂದಿಗೆ ಇಎಸ್‌ಐಸಿಯು ಅಗತ್ಯ ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಯನ್ನು ತಲುಪಿಸುವ ತನ್ನ ಬದ್ಧತೆಯನ್ನು ಉಳಿಸಿಕೊಂಡು ಭಾರತದ ಕಾರ್ಮಿಕ ಕಲ್ಯಾಣ ಕೇಂದ್ರಿತ ದೃಷ್ಟಿಕೋನಕ್ಕೆ ಅನುಗುಣವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ