Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಸಿ ಬೆಳೆಗಳಿಗೆ ಬೀಜ ಬ್ಯಾಂಕ್ ಸ್ಥಾಪನೆ


ಶಿವಮೊಗ್ಗ,ಮೇ.23: ಜಿಲ್ಲಾ ಕೃಷಿ ಇಲಾಖೆಯಿಂದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಂದು ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲಾಗುತ್ತಿದ್ದು, ರೈತರು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರದಾಯಕವಾಗಿ ಕೃಷಿ ಪದ್ದತಿಯಿಂದ ಅಭಿವೃದ್ದಿ ಮತ್ತು ನಿರ್ವಹಿಸುವ ತಳಿಗಳನ್ನು ದೇಶಿ ತಳಿಗಳೆಂದು ಕರೆಯಲಾಗಿದ್ದು, ಈ ಕಾರ್ಯಕ್ರಮದಡಿ ಆಯ್ಕೆಯಾದ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ಅದನ್ನು ಸಲಹಾ ಸಮಿತಿಗೆ ಶಿಫಾರಸು ಮಾಡಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವುದು.

ಇತ್ತೀಚಿಗೆ ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಮೂಲ ಸಮೀಕ್ಷೆ ಮೂಲಕ ಗುರುತಿಸಿ ಸಂರಕ್ಷಣೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದ್ದು, ಯೋಜನೆಯನ್ನು ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಹಾಗೂ ಬೀಜ ಬ್ಯಾಂಕ್‌ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ದರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರೆ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.

ಈ ಯೋಜನೆಯಡಿ ತಳಿಗಳನ್ನು ನೋಂದಾಯಿಸಿಕೊಳ್ಳಲು ಇಚ್ಚಿಸುವರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ