Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ: ಬೆಳೆವಿಮೆಗಾಗಿ ರೈತರು ನೋಂದಾಯಿಸಿ











ಕೊಪ್ಪಳ ಜೂನ್ 17  2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬೀಮಾ ಯೋಜನೆಯನ್ನು ಮುಂಗಾರು ಹಂಗಾಮಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರ ಬೆಳೆವಿಮೆ ನೊಂದಾಯಿಸಿಕೊಳ್ಳುವಂತೆ ಕೊಪ್ಪಳ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ನೀರಾವರಿ ಹತ್ತಿ ಮತ್ತು ಮಳೆಯಾಶ್ರಿತ ಹೆಸರು ಬೆಳೆಗಳಿಗೆ ನೋಂದಾಯಿಸಲು ಜುಲೈ 15 ಹಾಗೂ ಇತರೆ ಅಧಿಸೂಚಿತ ಎಲ್ಲಾ ಬೆಳೆಗಳಿಗೆ ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ರೈತರು ಬೆಳೆವಿಮೆ ನೋಂದಾಯಿಸಿ ಬೆಳೆವಿಮೆ ಪರಿಹಾರ ಲಾಭ ಪಡೆಯಬೇಕು. ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕು. ರೈತರು ಬಿತ್ತನೆ ಮಾಡುವ ಬೆಳೆಯನ್ನೆ ನೋಂದಾಯಿಸಬೇಕು ಮತ್ತು ತಮ್ಮ ಬೆಳೆಯನ್ನು ತಾವೇ ಖುದ್ದಾಗಿ ಬೆಳೆ ಸಮೀಕ್ಷೆಯನ್ನು ಮಾಡಬೇಕು. ರೈತರು ತಮ್ಮ ದಾಖಲಾತಿಗಳಾದ ಪಹಣಿ, ಆಧಾರಕಾರ್ಡ ಮತ್ತು ಬ್ಯಾಂಕ್ ಪಾಸ್ ಬುಕ್ ಜರಾಕ್ಸ ಇನ್ನೊಬ್ಬರಿಗೆ ಯಾವುದೇ ಕಾರಣಕ್ಕೂ ನೀಡಬಾರದು. ತಾವೇ ಖುದ್ದಾಗಿ ಬೆಳೆವಿಮೆ ನೋಂದಾಯಿಸಬೇಕು. ಒಂದು ವೇಳೆ ಬೇರೆ ರೈತರ ದಾಖಲಾತಿಗಳನ್ನು ಉಪಯೋಗಿಸಿಕೊಂಡು ಬೆಳೆವಿಮೆ ವಿಮೆ ನೋಂದಾಯಿಸಿದ್ದು, ಕಂಡು ಬಂದರೆ ಅಂತವರ ವಿವರಗಳನ್ನು ಕೂಡಲೇ ಕೃಷಿ ಇಲಾಖೆಗೆ ತಿಳಿಸಲು ಸೂಚಿಸಿದೆ.

ಅಧಿಸೂಚಿತ ಬೆಳೆಗಳ ವಿವರ: ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳ ವಿವರ ಇಂತಿದೆ. ಗಂಗಾವತಿ ತಾಲ್ಲೂಕಿನ ನೀರಾವರಿ ಭತ್ತ, ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನ ಮಳೆಯಾಶ್ರಿತ ಮುಸಕಿನಜೋಳ ಹಾಗೂ ಸಜ್ಜೆ, ಯಲಬುರ್ಗಾ ತಾಲ್ಲೂಕಿನ ಮಳೆಯಾಶ್ರಿತ ಹೆಸರು & ಮುಸುಕಿನಜೋಳ ಬೆಳೆ ಸೇರಿದೆ.

ಹೋಬಳಿ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳಾದ ಮಳೆಯಾಶ್ರಿತ ಅಥವಾ ನೀರಾವರಿ ಬೆಳೆಗಳಾದ ಭತ್ತ, ಜೋಳ, ಮುಸಕಿನ ಜೋಳ, ಸಜ್ಜೆ, ಸೂರ್ಯಕಾಂತಿ, ತೊಗರಿ, ನಲೆಗಡಲೆ (ಶೇಂಗಾ), ಹತ್ತಿ, ಈರುಳ್ಳಿ, ಹಾಗೂ ಮಳೆಯಾಶ್ರಿತ ಅಲಸಂದಿ, ನವಣೆ, ಹೆಸರು, ಹುರಳಿ, ಎಳ್ಳು ಬೆಳೆ ಮತ್ತು ಟಮೆಟೊ ಬೆಳೆ ಈ ಯೋಜನೆಯಡಿ ಒಳಗೊಂಡಿದೆ.

ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಇನ್ಸೂರೇನ್ಸ ಕೋ ಲೀಮಿಟೆಡ್ ಆಯ್ಕೆಯಾಗಿದ್ದು, ರೈತರು ಹೆಚ್ಚಿನ ಮಾಹಿತಿಗಾಗಿ ಇನ್ಸೂರೇನ್ಸ ಕಂಪನಿಯ ಪ್ರತಿನಿಧಿ ಅಥವಾ ಟೋಲ್ ಪ್ರೀ ನಂಬರ-18002093536 ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ್ ಒನ್ ಅಥವಾ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಪ್ರಕಟಣೆ ತಿಳಿಸಿದೆ.





























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ