Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉಚಿತ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ


ಹೊಸಪೇಟೆ (ವಿಜಯನಗರ) ಮೇ.29: ಹೊಸಪೇಟೆ ವಿಭಾಗದಿಂದ 2024-25ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾAಶದ ಮುಖಾಂತರ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮಕೈಗೊಳ್ಳಲಾಗಿರುತ್ತದೆ. ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪ್ಪನಹಳ್ಳಿ ಘಟಕಗಳಿಂದ ಪಾಸು ವಿತರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿರುತ್ತದೆ.
2024-25ನೇ ಸಾಲಿನಲ್ಲಿ ವಿಭಾಗದಲ್ಲಿ ಪಾಸು ವಿತರಿಸಲು ಪಾಸು ಕೌಂಟರಗಳನ್ನು ಸ್ಥಾಪಿಸಲಾಗಿರುತ್ತದೆ.
ಹೊಸಪೇಟೆ ಘಟಕ: ಹೊಸಪೇಟೆ ಘಟಕಕ್ಕೆ ಸಂಬAಧಿಸಿದAತೆ 1) ಹೊಸಪೇಟೆಯ ಬಸ್ ನಿಲ್ದಾಣ 2) ಕರ್ನಾಟಕ ಒನ್, ತಾಲೂಕು ಕೋರ್ಟ್ನ ಹಿಂದುಗಡೆ, ಕೆಎಲ್‌ಎಸ್ ಕಾಂಪ್ಲೆಕ್ಸ್, ಮಹಿಳಾ ಸಮಾಜ ಶಾಲೆ ಹತ್ತಿರ ಹೊಸಪೇಟೆ.
ಕೂಡ್ಲಿಗಿ ಘಟಕ: ಕೂಡ್ಲಿಗಿ ಘಟಕದಲ್ಲಿ 1) ಕರ್ನಾಟಕ ಒನ್, 7ನೇ ವಾರ್ಡ್, ವೆಂಕಟೇಶ್ವರ ದೇವಸ್ಥಾನ ರಸ್ತೆ ಕೂಡ್ಲಿಗಿ ಹಾಗೂ 2) ಕರ್ನಾಟಕ ಒನ್, ತಾಲೂಕು ಕಚೇರಿ, 1ನೇ ಮುಖ್ಯ ರಸ್ತೆ, ಕೊಟ್ಟೂರು.
ಹಡಗಲಿ ಘಟಕ: ಹಡಗಲಿ ಘಟಕದಲ್ಲಿ ಕರ್ನಾಟಕ ಒನ್, ವಾರ್ಡ್ ನಂ-9, ಸೊಪ್ಪಿನ ಕಾಳಮ್ಮ ಬಡಾವಣೆ ಹತ್ತಿರ, ಓಂ ಶಾಂತಿ ನಿಲಯ, ಹಡಗಲಿ
ಹಗರಿಬೊಮ್ಮನಹಳ್ಳಿ ಘಟಕ: ಕರ್ನಾಟಕ ಒನ್, ವಿಠ್ಠಲ್ ಆಸ್ಪತ್ರೆ ಎದುರು, ಅಂಚೆ ಕಚೇರಿ ಮುಖ್ಯ ರಸ್ತೆ, ರಾಮನಗರ, ಹಗರಿಬೊಮ್ಮನಹಳ್ಳಿ.
ಹರಪನಹಳ್ಳಿ ಘಟಕ: ಹರಪನಹಳ್ಳಿ ಘಟಕದಲ್ಲಿ ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಪಾಸು ಕೌಂಟರ್ ಸ್ಥಾಪಿಸಲಾಗಿರುತ್ತದೆ.
ಮೇ 27ರಿಂದ ವಿದ್ಯಾರ್ಥಿಗಳು ಬಸ್ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್  URL-sevasindhu.karnataka.gov.in ತಂತ್ರಾAಶದಲ್ಲಿ ಗೋ ಲೈವ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2024ರ ಜೂನ್ 1ನೇ ತಾರೀಖಿನಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಕ್ರಮವಹಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ