Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಉಚಿತ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ


ಹೊಸಪೇಟೆ (ವಿಜಯನಗರ) ಮೇ.29: ಹೊಸಪೇಟೆ ವಿಭಾಗದಿಂದ 2024-25ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾAಶದ ಮುಖಾಂತರ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮಕೈಗೊಳ್ಳಲಾಗಿರುತ್ತದೆ. ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪ್ಪನಹಳ್ಳಿ ಘಟಕಗಳಿಂದ ಪಾಸು ವಿತರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿರುತ್ತದೆ.
2024-25ನೇ ಸಾಲಿನಲ್ಲಿ ವಿಭಾಗದಲ್ಲಿ ಪಾಸು ವಿತರಿಸಲು ಪಾಸು ಕೌಂಟರಗಳನ್ನು ಸ್ಥಾಪಿಸಲಾಗಿರುತ್ತದೆ.
ಹೊಸಪೇಟೆ ಘಟಕ: ಹೊಸಪೇಟೆ ಘಟಕಕ್ಕೆ ಸಂಬAಧಿಸಿದAತೆ 1) ಹೊಸಪೇಟೆಯ ಬಸ್ ನಿಲ್ದಾಣ 2) ಕರ್ನಾಟಕ ಒನ್, ತಾಲೂಕು ಕೋರ್ಟ್ನ ಹಿಂದುಗಡೆ, ಕೆಎಲ್‌ಎಸ್ ಕಾಂಪ್ಲೆಕ್ಸ್, ಮಹಿಳಾ ಸಮಾಜ ಶಾಲೆ ಹತ್ತಿರ ಹೊಸಪೇಟೆ.
ಕೂಡ್ಲಿಗಿ ಘಟಕ: ಕೂಡ್ಲಿಗಿ ಘಟಕದಲ್ಲಿ 1) ಕರ್ನಾಟಕ ಒನ್, 7ನೇ ವಾರ್ಡ್, ವೆಂಕಟೇಶ್ವರ ದೇವಸ್ಥಾನ ರಸ್ತೆ ಕೂಡ್ಲಿಗಿ ಹಾಗೂ 2) ಕರ್ನಾಟಕ ಒನ್, ತಾಲೂಕು ಕಚೇರಿ, 1ನೇ ಮುಖ್ಯ ರಸ್ತೆ, ಕೊಟ್ಟೂರು.
ಹಡಗಲಿ ಘಟಕ: ಹಡಗಲಿ ಘಟಕದಲ್ಲಿ ಕರ್ನಾಟಕ ಒನ್, ವಾರ್ಡ್ ನಂ-9, ಸೊಪ್ಪಿನ ಕಾಳಮ್ಮ ಬಡಾವಣೆ ಹತ್ತಿರ, ಓಂ ಶಾಂತಿ ನಿಲಯ, ಹಡಗಲಿ
ಹಗರಿಬೊಮ್ಮನಹಳ್ಳಿ ಘಟಕ: ಕರ್ನಾಟಕ ಒನ್, ವಿಠ್ಠಲ್ ಆಸ್ಪತ್ರೆ ಎದುರು, ಅಂಚೆ ಕಚೇರಿ ಮುಖ್ಯ ರಸ್ತೆ, ರಾಮನಗರ, ಹಗರಿಬೊಮ್ಮನಹಳ್ಳಿ.
ಹರಪನಹಳ್ಳಿ ಘಟಕ: ಹರಪನಹಳ್ಳಿ ಘಟಕದಲ್ಲಿ ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಪಾಸು ಕೌಂಟರ್ ಸ್ಥಾಪಿಸಲಾಗಿರುತ್ತದೆ.
ಮೇ 27ರಿಂದ ವಿದ್ಯಾರ್ಥಿಗಳು ಬಸ್ ಪಾಸ್‌ಗಾಗಿ ಸೇವಾಸಿಂಧು ಪೋರ್ಟಲ್  URL-sevasindhu.karnataka.gov.in ತಂತ್ರಾAಶದಲ್ಲಿ ಗೋ ಲೈವ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2024ರ ಜೂನ್ 1ನೇ ತಾರೀಖಿನಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಕ್ರಮವಹಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ