Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಜು.07
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ಬಳ್ಳಾರಿಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಪಂಗಡದ ಮಹಿಳಾ ಫಲಾನುಭವಿಗಳು ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗಾಗಿ 24 ದಿನಗಳ ಉಚಿತ ‘ಫ್ಯಾಷನ್ ಡಿಸೈನಿಂಗ್’ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫ್ಯಾಷನ್ ಡಿಸೈನಿಂಗ್ ಕುರಿತು ಪ್ರಾಯೋಗಿಕ ಮತ್ತು ಸಿದ್ಧಾಂತ ತರಬೇತಿಯೊಂದಿಗೆ, ಉದ್ಯಮಶೀಲತೆಯ ಗುಣಲಕ್ಷಣಗಳು, ಸ್ವಯಂ ಉದ್ಯೋಗ ಆರಂಭಿಸುವ ಹಂತಗಳು, ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ, ಸಾಲ ಹಾಗೂ ಹಣಕಾಸು ಸೌಲಭ್ಯಗಳು, ಲೆಕ್ಕಪತ್ರ ನಿರ್ವಹಣೆ ಮತ್ತು ಯೋಜನಾ ವರದಿ ತಯಾರಿಕೆಯ ಬಗ್ಗೆ ಅನುಭವಿ ಉಪನ್ಯಾಸಕರಿಂದ ಮಾಹಿತಿ ನೀಡಲಾಗುವುದು.
ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಹಾಯವನ್ನು ಒದಗಿಸಲಾಗುವುದು.
*ಅರ್ಹತೆಗಳು:*
ವಯೋಮಿತಿಯು 18 ರಿಂದ 35 ವರ್ಷದೊಳಗಿನವರಾಗಿರಬೇಕು. ಕನಿಷ್ಠ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರು ಹಾಗೂ ಯುವನಿಧಿ ಯೋಜನೆಯ ಆಸಕ್ತ ಫಲಾನುಭವಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 15, 2026 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ - 583102. ಮೊ.9449226221/7483538942 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ - ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ: ರಾಜ್ಯಕ್ಕೆ ಅಪಾರ ನಷ್ಟಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ