Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿ
ಶಿವಮೊಗ್ಗ ನವೆಂಬರ್ 08() ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಅಡಿ 2024-25 ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಶಿವಮೊಗ್ಗ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನ.14 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಿಳಘಟ್ಟ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಪೂರ್ಣದೃಷ್ಟಿ ದೋಷ, ಶ್ರವಣ ದೋಷ, ಲೋಕೋಮೋಟರ್ (ದೈಹಿಕ ಅಂಗವಿಕಲತೆ), ಸೆರೆಬ್ರಲ್ ಪಾಲ್ಸಿ, ಬಹು ಅಂಗಾಂಗ ವಿಕಲತೆ, ದೈಹಿಕ ಅಂಗವಿಕಲತೆವುಳ್ಳ ಮಕ್ಕಳು ಭಾಗವಹಿಸಬಹುದು.
ಶಿಬಿರಕ್ಕೆ ಹಾಜರಾಗಲು ಅಂಗವಿಕಲ ಗುರುತಿನ ಚೀಟಿ, ಆದಾಯ ಪ್ರಮಾಣ ಪತ್ರ, ಮಗುವಿನ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಮಗುವಿನ ಪಾಸ್‌ಪೋರ್ಟ್ ಸೈಜಿನ 4 ಭಾವಚಿತ್ರಗಳು ಮಗುವಿನ ಬ್ಯಾಂಕ್ ಪಾಸ್ ಪುಸ್ತಕ, ಮಗುವಿನ ಆಧಾರ್ ಕಾರ್ಡ್ನ್ನು ತರಬೇಕು .
ಈ ಶಿಬಿರದಲ್ಲಿ ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಾಲೆಗಳ ವಿಕಲಚೇತನ ಮಕ್ಕಳು(ಈ ಹಿಂದೆ ಸಾಧನ ಸಲಕರಣೆ ಪಡೆದ ಮಕ್ಕಳನ್ನು ಹೊರತುಪಡಿಸಿ) ಇದರ ಸದುಪಯೋಗವನ್ನು ಪಡೆಯಬಹುದೆಂದು ಬಿಇಓ ರಮೇಶ್ ಮತ್ತು ಬಿಆರ್‌ಸಿ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರು ತಿಳಿಸಿರುತ್ತಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ