Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೌತಮ್ ಗಂಭೀರ್ ಟೀಂ ಇಂಡಿಯಾ ನೂತನ ತರಬೇತುದಾರ

ಮುಂಬೈ, 8 : ನಿರೀಕ್ಷೆಯಂತೆ ಭಾರತೀಯ ಕ್ರಿಕೆಟ್ ತಂಡದ ನೂತನ ತರಬೇತುದಾರರಾಗಿ ಮಾಜಿ ಬ್ಯಾಟ‌ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ ಎಂದು ಹೇಳಿದ್ದಾರೆ.
ಗಂಭೀರ್ ಅವರು ತಮ್ಮ ವೃತ್ತಿ ಜೀವನದಲ್ಲಿ ಹಲವು ಪ್ರಮುಖ ಪಾತ್ರಗಳನ್ನು ನಿರ್ಬಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಆದ್ದರಿಂದ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲು ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಶಾ ವ್ಯಕ್ತಪಡಿಸಿದ್ದಾರೆ.
ಹೊಸ ಇನ್ನಿಂಗ್ಸ್ ಆರಂಭಿಸುತ್ತಿರುವ ಗಂಭೀರ್ ಅವರಿಗೆ ಬಿಸಿಸಿಐ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್ ಗೆದ್ದುಕೊಟ್ಟಿರುವ ಗೌತಮ್ ಗಂಭೀರ್ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ಷ್ಮೀ ಸೂಪರ್ ಜೈಂಟ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದ ಗಂಭೀರ್, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸುವಂತೆ ಮಾಡಿದ್ದರು.
ಗಂಭೀರ್ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಮುಖ್ಯಕೋಚ್ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್ ಸಹ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್ ಅವರಿಗಿಲ್ಲ. ಆದರೂ ಹೊಸ ಜವಾಬ್ದಾರಿ ಗಂಭೀರ್ ಸವಾಲಾಗಿ ಪರಿಣಮಿಸಿದೆ.
ಟಿ20 ವಿಶ್ವಕಪ್ ಟೂರ್ನಿ ಬಳಿಕ ದ್ರಾವಿಡ್ ಅವರ ಮುಖ್ಯಕೋಚ್ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.
ದ್ರಾವಿಡ್ ಸಾರಥ್ಯದಲ್ಲಿ ಇತ್ತೀಚೆಗೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆದ ಟಿ.20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ರೋಹಿತ್‌ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ