Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್


ರಾಯಚೂರು ಆಗಸ್ಟ್ 12 : ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಳ್ಳುವುದರ ಜೊತೆಗೆ ಯಾವುದೇ ಪ್ರಮಾಣದ ಉದ್ಯಮಗಳಾಗಲಿ ಅವುಗಳನ್ನು ಪ್ರಾರಂಭಿಸುವ ಮೊದಲು ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವದು ಬಹಳ ಅವಶ್ಯಕ ಎಂದು ಸಿಡಾಕ್ ಸಲಹೆಗಾರರಾದ ಜಿ.ಯು.ಹುಡೇದ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಇತ್ತೀಚೆಗೆ ರಾಯಚೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 3 ದಿನಗಳ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ದೇಶೀಸಿ ಮಾತನಾಡುತ್ತಾ, ಉದ್ಯಮಗಳನ್ನು ಪ್ರಾರಂಭಿಸುವವರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ, ಎಂದು ತಿಳಿಸಿ ಅರ್ಥಿಕ ಅಭಿವೃದ್ಧಿಗೆ ಉದ್ಯಮಗಳ ಪಾತ್ರ ಮಹತ್ವತ್ತಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಗುಣ ಬಸವರಾಜ, ಇವರು ಬಿ ಎ, ಬಿಕಮ್, ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಾಂiÀið ಶಾಘ್ಲಿಸುತ್ತಾ, ಮುಂದೆ ಬರುವ ದಿನಗಳಲ್ಲಿ ಸರಿಯಾದ ಗುರಿಯನ್ನು ಇಟ್ಟುಕೊಂಡು ಸಮಾಜವನ್ನು & ದೇಶವನ್ನು ಬಲಪಡಿಸುವ ನಿಟ್ಟಿನಲ್ಲಿ ಧನಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು. ವಿದ್ಯಾರ್ಥಿನಿಯರಿಗೆ ಸಿಡಾಕ್ ಸಂಸ್ಥೆಯಿAದ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಶ್ರೀಮತಿ ನಾಗರತ್ನ, ಅವರು ತಮ್ಮ ಅನುಭವ ಹಂಚಿಕೊAಡರು, ಶಿಬಿರಾರ್ಥಿಗಳಾದ ಕುಮಾರಿ ಅಶ್ವಿನಿ, ಕುಮಾರಿ ಸಾನಿಯಾ ಇವರುಗಳು ತರಬೇತಿ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು.
ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು, ಇತ್ಯಾದಿ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ, ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳಿಂದ ಉಪನ್ಯಾಸ / ಮಾಹಿತಿ ನೀಡಲಾಯಿತು ಎಂದು ಶ್ರೀ ನಾಗರಾಜ ಕೆ, ಸಿಡಾಕ್ ತರಬೇತಿದಾರರು, ತಿಳಿಸಿದರು.
ಸಮಾರಂಭದಲ್ಲಿ ಕುಮಾರಿ ಸಂಗಿತಾ ಪ್ರಾರ್ಥಿಸಿದರು. ನಾಗರಾಜ ಕೆ, ತರಬೇತಿದಾರರು, ಸಿಡಾಕ್, ರಾಯಚೂರು ಇವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.
ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಮತಿ ಇಂದಿರಾ, ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು, ಉದ್ಯೋಗ ಕೋಶದ ಸಂಚಾಲಕರಾದ ಶ್ರೀ ರಂಗನಾಥ ಬಿಲ್ಲಾದ, ಡಾ ಜ್ಯೋತಿ ಐಕ್ಯೂಎಸಿ ಸಂಚಾಲಕರು, ಪ್ರಾಧ್ಯಾಪಕರುಗಳಾದ ಡಾ. ಉಮಾದೇವಿ, ಡಾ. ಆಸ್ಮಾ, ಶರಣೇಗೌಡ ಕೆ ಐಕ್ಯೂಎಸಿ ಸಹ ಸಂಚಾಲಕರು, ಸಂತೋಷ, ವಿಷ್ವನಾಥ ಎಪ್ ಎಲ್ ಸಿ, ಎಸ್ ಬಿ ಐ, ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ಮನೋಹರÀ, ಬಜಾರಪ್ಪ ಇವರು ವಂದನಾರ್ಪಣೆ ಮಾಡಿದರು. ಸಭೆಯಲ್ಲಿ ತರಬೇತಿ ಪಡೆದ 65 ಅಭ್ಯರ್ಥಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ