Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ; ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ: ಸಿಎಸ್ ಚಂದ್ರಭೂಪಾಲ್

ಶಿವಮೊಗ್ಗ ಜು, 17: ಗೃಹ ಲಕ್ಷ್ಮಿ ಯೋಜನೆಯ 31 ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ‌ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದ ನಂತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದರು.
ಗೃಹಲಕ್ಷ್ಮಿ ಯೋಜನೆ:
ಶಿವಮೊಗ್ಗ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆಯಾಗಿದ್ದು ಜಿಲ್ಲೆಯ ಒಟ್ಟು 3,79,858 ಅರ್ಹ ಮಹಿಳಾ ಫಲಾನುಭವಿಗಳಿಗೆ ಈ ಕಂತಿನ ಲಾಭ ಸಿಗಲಿದೆ.
ಒಟ್ಟು ರೂ. 75.97 ಕೋಟಿ ಹಣ ಬಿಡುಗಡೆಯಾಗಿದೆ. ಪ್ರತಿಯೊಬ್ಬ ಫಲಾನುಭವಿಯ ಖಾತೆಗೆ ತಲಾ 2,000 ರೂ. ಹಣವು ಮುಂದಿನ ಒಂದೆರಡು ದಿನಗಳಲ್ಲಿ ನೇರವಾಗಿ ಜಮೆಯಾಗಲಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 30 ಕಂತುಗಳಲ್ಲಿ ಡಿ.ಬಿ.ಟಿ. ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಒಟ್ಟು 3,110.48 ಕೋಟಿಗೂ ಅಧಿಕ ರೂಪಾಯಿ ಜಮೆಯಾಗಿದೆ.
ಮೃತರ ಖಾತೆಯಿಂದ ಹಣ ವಾಪಸ್: ಜಿಲ್ಲೆಯಲ್ಲಿ ಮರಣ ಹೊಂದಿದ 9,247 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ಅವರ ಖಾತೆಗೆ ಜಮೆಯಾಗಿದ್ದ ಹಣವನ್ನು ಹಿಂಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈ ಪೈಕಿ ಈಗಾಗಲೇ 3,600 ಫಲಾನುಭವಿಗಳಿಂದ 3,79,82,000 ರೂ.ಗಳನ್ನು ಯಶಸ್ವಿಯಾಗಿ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆ-ಸಮೀಕ್ಷೆ:
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರ ಮಾಹಿತಿ ಪರಿಶೀಲನಾ ಕಾರ್ಯವು ಜುಲೈ 1 ರಿಂದ ಆರಂಭವಾಗಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮನೆ ಬಾಗಿಲಿಗೆ ಮೆಸ್ಕಾಂ ಸಿಬ್ಬಂದಿ: ಮೆಸ್ಕಾಂ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಫಲಾನುಭವಿಗಳು ಈ ಸಮೀಕ್ಷೆಗಾಗಿ ಮೆಸ್ಕಾಂ ಕಚೇರಿಗೆ ಅಲೆಯುವ ಅಗತ್ಯವಿಲ್ಲ.
ಉಚಿತ ವಿದ್ಯುತ್ ಸ್ಥಗಿತವಾಗಲ್ಲ: ಈ ಸಮೀಕ್ಷೆಯು ಕೇವಲ ಫಲಾನುಭವಿಗಳ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ.
ಜಿಲ್ಲೆಯಲ್ಲಿ ಯೋಜನೆಗೆ ನೋಂದಣಿಯಾಗಿರುವ ಒಟ್ಟು 5,09,133 ಗೃಹಗಳಲ್ಲಿ ಈಗಾಗಲೇ 1,38,566 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ. 29 ರಷ್ಟು ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರು ಸಿಬ್ಬಂದಿಗೆ ಅಗತ್ಯ ದಾಖಲೆ ನೀಡಿ ಸಹಕರಿಸುವಂತೆ ಕೋರಿದರು.
ಅನ್ನಭಾಗ್ಯ ಯೋಜನೆ: ರೋಗಿಗಳಿಗೆ 15 ದಿನಗಳಲ್ಲಿ ಬಿಪಿಎಲ್ ಕಾರ್ಡ್
ತುರ್ತು ಆರೋಗ್ಯ ಸೇವೆಗಳ ಕಾರಣಕ್ಕಾಗಿ ಬಿ.ಪಿ.ಎಲ್. ಕಾರ್ಡ್ ಕೋರಿ ಅರ್ಜಿ ಸಲ್ಲಿಸುವ ಸಾರ್ವಜನಿಕರಿಗೆ ಸರ್ಕಾರ ಉತ್ತಮ ಅವಕಾಶ ನೀಡಿದೆ. ಅನಾರೋಗ್ಯ ಪೀಡಿತರಿಗೆ ಯಾವುದೇ ವಿಳಂಬವಿಲ್ಲದೆ 15 ದಿನಗಳ ಒಳಗಾಗಿ ಕಾರ್ಡ್ ವಿತರಿಸುವಂತೆ ಸರ್ಕಾರವು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ಸಿ.ಎಸ್. ಚಂದ್ರಭೂಪಾಲ ಅವರು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಂ ಎಸ್ ಬಸವರಾಜಪ್ಪ, ಆರ್ ಶಿವಣ್ಣ, ಇಕ್ಕೇರಿ ರಮೇಶ್
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಂ ಮಧು, ಸದಸ್ಯರುಗಳಾದ ಅಮೀರ್ ಅಮ್ಜಾ, ಎಸ್ ಪ್ರಭಾಕರ್, ಭವ್ಯ ಕೃಷ್ಣಮೂರ್ತಿ, ಎಂ ರಾಹುಲ್, ಅರ್ಚನಾ, ಎನ್ ನವುಲೇಶ್,ಯು ಶಿವಾನಂದ, ಕೆ ಉದಯಕುಮಾರ್, ಎಚ್ ಬಿ ಚಿದಂಬರ, ಎಚ್ ಕೆ ಜಯಶೀಲಪ್ಪಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ‌ನಿರ್ದೇಶಕಿ ಭಾರತಿ ಬಣಕಾರ್, ಸಿಡಿಪಿಓ‌ ಗಂಗೂಬಾಯಿ, ಮೆಸ್ಕಾಂ ಇಲಾಖೆ ನಿಯಂತ್ರಣಾಧಿಕಾರಿ ಚಂದ್ರಕಲಾ, ಇತರೆ ಅಧಿಕಾರಿಗಳು ಹಾಜರಿದ್ದರು. ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ; ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ: ಸಿಎಸ್ ಚಂದ್ರಭೂಪಾಲ್ಬರಗಾಲದ ಆತಂಕ: ಪರ್ಯಾಯ ಬೆಳೆ ಯೋಜನೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸುವಂತೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಜಪ್ತಿ ಮಾಡಲಾದ 608.70 ಕ್ವಿಂ. ಅಕ್ಕಿ ಹರಾಜು ಜುಲೈ 27 ರಂದುರೇಷ್ಮೆ ಇಲಾಖೆ ವಿವಿಧ ಯೋಜನೆಗಳು: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ -- ಎಸ್‌ಐಆರ್ ವೇಳಾಪಟ್ಟಿ ಮರುನಿಗದಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಜುಲೈ 17 ರಿಂದ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆ: ನಿಷೇದಾಜ್ಞೆ ಜಾರಿಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಶೇ. 99.78 ರಷ್ಟು ಎಸ್‌ಐಆರ್ ಗಣತಿ ನಮೂನೆಗಳ ವಿತರಣೆಬಳ್ಳಾರಿಯಲ್ಲಿ ಜು.18 ರಂದು ಮಿನಿ ಉದ್ಯೋಗ ಮೇಳ: ಉಚಿತ ಪ್ರವೇಶರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ಸಮ್ಮತಿ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಸ್ವತಂತ್ರರು; ಭೂಮಿಯ ಯಥಾಸ್ಥಿತಿ ಬದಲಾಗಲ್ಲ ಇದು ನನ್ನ ಕನಸಿನ ಯೋಜನೆಯಲ್ಲ, ಹಿಂದಿನ ಸರ್ಕಾರಗಳ ಯೋಜನೆ: ಡಿ.ಕೆ. ಶಿವಕುಮಾರ್