Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಉತ್ಸವ-2025 ತುಂಗಭದ್ರೆಗೆ ಆರತಿ: ನಾಡಿನ ಸುಭೀಕ್ಷೆಗೆ ಪ್ರಾರ್ಥನೆ

ವಿಜಯನಗರ (ಹೊಸಪೇಟೆ), ಫೆಬ್ರವರಿ.26 :

ಹಂಪಿ ಉತ್ಸವದ ನಿಮಿತ್ತ ಬುಧವಾರ ಸಂಜೆ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನ ಹಿಂಭಾಗದ ನದಿ ತಟದಲ್ಲಿ ತುಂಗಭದ್ರೆಗೆ ತುಂಗಾರತಿ ಮಾಡುವ ಮೂಲಕ ನಾಡಿನ ಸುಭೀಕ್ಷೆಗೆ ಪ್ರಾರ್ಥಿಸಲಾಯಿತು.

ನಾಡಮಾತೆ ಶ್ರೀಭುವನೇಶ್ವರಿ ದೇವಿಗೆ ಕುಂಕುಮಾರ್ಚನೆ ಹಾಗೂ ಅಭಿಷೇಕ ನೆರವೇರಿಸಲಾಯಿತು.

ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಸೇರಿದಂತೆ ಗಣ್ಯಮಾನ್ಯರು ತುಂಗಾಭದ್ರ ನದಿಗೆ ಪುಷ್ಪ, ಕ್ಷೀರ, ತುಪ್ಪ, ಮರದ ಬಾಗಿನ ಸಮರ್ಪಿಸಿದರು. ಗಂಗೆ ಸೇರಿದಂತೆ ನಾಡಿನ ಪವಿತ್ರ ನದಿಗಳು, ವರುಣ ದೇವನನ್ನು ಸ್ಮರಿಸಿ ತುಂಗಾರತಿ ಕೈಗೊಳ್ಳಲಾಯಿತು.ಈ ಬಾರಿ ನಾಡಿನಾದ್ಯಂತ ಉತ್ತಮ ಮಳೆಯಾಗಿ, ಎಲ್ಲ ನದಿಗಳು ತುಂಬಿ ಹರಿಯಲಿ. ಜಲಾಶಯಗಳು ಭರ್ತಿಯಾಗಿ, ರೈತರು ಉತ್ತಮ ಬೆಳೆ ಬೆಳೆದು ನಾಡು ಸುಭೀಕ್ಷವಾಗಲಿ ಎಂದು ಹಂಪಿ ವಿರೂಪಾಕ್ಷ ಸೇರಿದಂತೆ ಸಮಸ್ತ ದೇವತೆಗಳಲ್ಲಿ ಪ್ರಾರ್ಥಿಸಲಾಯಿತು.



ಶ್ರೀವಿದ್ಯಾರಣ್ಯ ಗುರುಗಳು, ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಾಥ ಹಾಗೂ ಮೋಹನ್ ಜೋಶಿ ನೇತೃತ್ವದ ತಂಡ ತುಂಗರಾತಿ ಕಾರ್ಯಕ್ರಮವನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿತು.
ಶಾಸಕ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ದಂಪತಿ ಸಮೇತವಾಗಿ ತುಂಗಾರತಿ ಸಂಕಲ್ಪ ಕೈಗೊಂಡರು.
ಜಿ.ಪಂ.ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು.ಬಿ.ಎಲ್ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ, ತಹಶೀಲ್ದಾರ್ ಶೃತಿ ಮಾಳಪ್ಪ ಗೌಡ, ಡಿಹೆಚ್‌ಓ ಶಂಕರ್ ನಾಯ್ಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ತುಂಗಾರತಿ ಅಂಗವಾಗಿ ಬಾನಂಗಳದಲ್ಲಿ ಪಟಾಕಿ ಸಿಡಿಸಿ ಸಂತಸ ಹಂಚಿಕೊಳ್ಳಲಾಯಿತು. ಹೊಸಪೇಟೆ ನಗರದ ಗಗನ ಮತ್ತು ಅವರ ತಂಡ ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಗಳನ್ನು ಪ್ರಸ್ತುತ ಪಡಿಸಿದರು.

=======

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ