Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ಸಮೃದ್ಧಿ: ಎಡಿಸಿ ಮಹಮ್ಮದ್ ಎನ್.ಝುಬೇರ್

ಬಳ್ಳಾರಿ,ಡಿ.18


ಸಿರಿಧಾನ್ಯಗಳು ಪೋಷಕಾಂಶಗಳಿಂ್ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಬಹಳ ಸಹಾಯಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್ ಅವರು ಹೇಳಿದರು.
ನಗರದ ಜಂಟಿ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025ರ ಪ್ರಯುಕ್ತ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕಾಗಿದೆ. ಸಜ್ಜೆ, ಜೋಳ, ರಾಗಿ, ಮತ್ತು ನವಣೆ ಸೇರಿದಂತೆ ಮುಂತಾದ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ಆಹಾರಗಳ ಲಾಭ ಉಪಯುಕ್ತತೆ ಮತ್ತು ಬಳಕೆ ಕುರಿತಂತೆ ಹೆಚ್ಚಿನ ರೀತಿಯಲ್ಲಿ ವ್ಯಾಪಕ ಅರಿವು ಮೂಡಿಸುವ ದಿಶೆಯಲ್ಲಿ ಈ ರೀತಿಯ ಸ್ಪರ್ಧೆಗಳು ಬಹಳಷ್ಟು ಉಪಯೋಗಕಾರಿ ಎಂದು ತಿಳಿಸಿದರು.
ವಿದೇಶಿ ಆಹಾರ ಪದಾರ್ಥಗಳಾದ ಪಿಜ್ಜಾ, ಬರ್ಗರ್ ಮತ್ತು ಡೊಮಿನೋಸ್ ಮತ್ತು ಎಣ್ಣೆ ಪದಾರ್ಥ ಸೇವಿಸುವುದು ಆರೋಗ್ಯ ಪೂರಕವಲ್ಲ. ಪಾಕ ಸ್ಪರ್ಧೆಗೆ ಮಾತ್ರ ಸಿರಿಧಾನ್ಯ ಪದಾರ್ಥಗಳು ಸೀಮಿತವಾಗಬಾರದು. ನಿಮ್ಮ ಮನೆಗಳಲ್ಲಿ ಸಹ ಪ್ರತಿದಿನ ಸಿರಿಧಾನ್ಯಗಳಿಂದ ವಿವಿಧ ಬಗೆಯ ಪದಾರ್ಥಗಳು ತಯಾರಿಸಿ, ನಿಮ್ಮ ಮಕ್ಕಳಿಗೆ ನೀಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಸೋಮ ಸುಂದರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಎನ್.ಕೆಂಗೇಗೌಡ, ಹಗರಿ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಶಿಲ್ಪಾ, ರಾಜೇಶ್ವರಿ, ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿ ವರ್ಗ ಮತ್ತು ಮಹಿಳೆಯರು ಉಪಸ್ಥಿತರಿದ್ದರು.
-----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ