Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ಸಮೃದ್ಧಿ: ಎಡಿಸಿ ಮಹಮ್ಮದ್ ಎನ್.ಝುಬೇರ್

ಬಳ್ಳಾರಿ,ಡಿ.18


ಸಿರಿಧಾನ್ಯಗಳು ಪೋಷಕಾಂಶಗಳಿಂ್ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮಧುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಬಹಳ ಸಹಾಯಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್ ಅವರು ಹೇಳಿದರು.
ನಗರದ ಜಂಟಿ ಕೃಷಿ ನಿರ್ದೇಶಕ ಕಚೇರಿ ಆವರಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025ರ ಪ್ರಯುಕ್ತ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಬೇಕಾಗಿದೆ. ಸಜ್ಜೆ, ಜೋಳ, ರಾಗಿ, ಮತ್ತು ನವಣೆ ಸೇರಿದಂತೆ ಮುಂತಾದ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಈ ಆಹಾರಗಳ ಲಾಭ ಉಪಯುಕ್ತತೆ ಮತ್ತು ಬಳಕೆ ಕುರಿತಂತೆ ಹೆಚ್ಚಿನ ರೀತಿಯಲ್ಲಿ ವ್ಯಾಪಕ ಅರಿವು ಮೂಡಿಸುವ ದಿಶೆಯಲ್ಲಿ ಈ ರೀತಿಯ ಸ್ಪರ್ಧೆಗಳು ಬಹಳಷ್ಟು ಉಪಯೋಗಕಾರಿ ಎಂದು ತಿಳಿಸಿದರು.
ವಿದೇಶಿ ಆಹಾರ ಪದಾರ್ಥಗಳಾದ ಪಿಜ್ಜಾ, ಬರ್ಗರ್ ಮತ್ತು ಡೊಮಿನೋಸ್ ಮತ್ತು ಎಣ್ಣೆ ಪದಾರ್ಥ ಸೇವಿಸುವುದು ಆರೋಗ್ಯ ಪೂರಕವಲ್ಲ. ಪಾಕ ಸ್ಪರ್ಧೆಗೆ ಮಾತ್ರ ಸಿರಿಧಾನ್ಯ ಪದಾರ್ಥಗಳು ಸೀಮಿತವಾಗಬಾರದು. ನಿಮ್ಮ ಮನೆಗಳಲ್ಲಿ ಸಹ ಪ್ರತಿದಿನ ಸಿರಿಧಾನ್ಯಗಳಿಂದ ವಿವಿಧ ಬಗೆಯ ಪದಾರ್ಥಗಳು ತಯಾರಿಸಿ, ನಿಮ್ಮ ಮಕ್ಕಳಿಗೆ ನೀಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಸೋಮ ಸುಂದರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್, ಎನ್.ಕೆಂಗೇಗೌಡ, ಹಗರಿ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಶಿಲ್ಪಾ, ರಾಜೇಶ್ವರಿ, ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನಂದ ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿ ವರ್ಗ ಮತ್ತು ಮಹಿಳೆಯರು ಉಪಸ್ಥಿತರಿದ್ದರು.
-----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ