Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಹೆಚ್ಚಳ; ಪ್ರಧಾನಿ ಸಮಿತಿ ವರದಿ

ಭಾರತದಲ್ಲಿ 1950 ಮತ್ತು 2015 ರ ನಡುವೆ ಹಿಂದೂ ಜನಸಂಖ್ಯೆಯ ಶೇಕಡಾ 7.82 ರಷ್ಟು ಕಡಿಮೆಯಾಗಿದೆ, ಆದರೆ ಮುಸ್ಲಿಮರ ಸಂಖ್ಯೆ ಶೇಕಡಾ 43.15 ರಷ್ಟು ಹೆಚ್ಚಾಗಿದೆ ಎಂದು ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ ವರದಿಯಲ್ಲಿ (EAC-PM) ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
'ಧಾರ್ಮಿಕ ಅಲ್ಪಸಂಖ್ಯಾತರ ಪಾಲು: ಕ್ರಾಸ್-ಕಂಟ್ರಿ ಅನಾಲಿಸಿಸ್ (1950-2015)' ಎಂಬ ಶೀರ್ಷಿಕೆಯ ಪತ್ರಿಕಾ ವರದಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಜೈನರ ಜನಸಂಖ್ಯೆ 1950 ರಲ್ಲಿ ಶೇಕಡಾ 0.45 ರಿಂದ 2015 ರಲ್ಲಿ ಶೇಕಡಾ 0.36 ಕ್ಕೆ ಇಳಿದಿದೆ ಎಂದು ವರದಿ ಮಾಡಿದೆ.

78.06ಕ್ಕೆ ಕುಸಿದ ಹಿಂದೂ ಜನಸಂಖ್ಯೆ 1950ರಲ್ಲಿ ಶೇ 84.68 ರಷ್ಟಿದ್ದ ಬಹುಸಂಖ್ಯಾತ ಹಿಂದೂ ಜನಸಂಖ್ಯೆಯಲ್ಲಿ 2015 ರಲ್ಲಿ ಶೇಕಡಾ 78.06 ಕ್ಕೆ ಕುಸಿದಿದೆ (7.82 ರಷ್ಟು ಕುಸಿತ). 1950 ರಲ್ಲಿ ಮುಸ್ಲಿಂ ಜನಸಂಖ್ಯೆಯು ಒಟ್ಟಾರೆ ಜನಸಂಖ್ಯೆಯ ಶೇಕಡಾ 9.84 ರಷ್ಟಿತ್ತು ಮತ್ತು 2015 ರಲ್ಲಿ ಶೇಕಡಾ 14.09 ಕ್ಕೆ ಏರಿಕೆ ಕಂಡಿದೆ ಎಂದು ಇಎಸಿ-ಪಿಎಂ ಸದಸ್ಯ ಶಮಿಕಾ ರವಿ ನೇತೃತ್ವದ ತಂಡವು ಸಿದ್ಧಪಡಿಸಿದ ವರದಿಯಲ್ಲಿ ಹೇಳಲಾಗಿದೆ. ಕ್ರಿಶ್ಚಿಯನ್ ಜನಸಂಖ್ಯೆಯ ಪಾಲು ಶೇಕಡಾ 2.24 ರಿಂದ 2.36 ಕ್ಕೆ ಏರಿಕೆ ಕಂಡಿದೆ. 1950 ಮತ್ತು 2015 ರ ನಡುವೆ 5.38 ಶೇಕಡಾ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ಸಿಖ್ ಜನಸಂಖ್ಯೆಯ ಪಾಲು 1950 ರಲ್ಲಿ ಶೇಕಡಾ 1.24 ರಿಂದ 2015 ರಲ್ಲಿ ಶೇಕಡಾ 1.85 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಪಾರ್ಸಿ ಜನಸಂಖ್ಯೆಯ ಪಾಲು ಶೇಕಡಾ 85 ರಷ್ಟು ಕುಸಿತವನ್ನು ಕಂಡಿದೆ, 1950 ರಲ್ಲಿ ಪಾಲು 0.004 ರಿಂದ 2015 ರಲ್ಲಿ ಶೇ 0.03 ಕ್ಕೆ ಇಳಿಕೆಯಾಗಿದೆ.

ಸಮಾಜದಲ್ಲಿ ವೈವಿಧ್ಯತೆಯನ್ನು ಬೆಳೆಸಲು ಅನುಕೂಲಕರ ವಾತಾವರಣವಿದೆ" ಎಂದು ಈ ಅಂಕಿ ಅಂಶಗಳು ಸೂಚಿಸುತ್ತದೆ, ತಳಮಟ್ಟದ ಮೂಲಕ ಪೋಷಣೆಯ ವಾತಾವರಣ ಮತ್ತು ಸಾಮಾಜಿಕ ಬೆಂಬಲವನ್ನು ಒದಗಿಸದೆ ಸಮಾಜದ ಹಿಂದುಳಿದ ವರ್ಗಗಳಿಗೆ ಉತ್ತಮ ಜೀವನ ಫಲಿತಾಂಶಗಳನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಭೂತಾನ್ ಮತ್ತು ಅಫ್ಘಾನಿಸ್ತಾನದಂತಹ ದೇಶಗಳಲ್ಲಿ ಬಹುಸಂಖ್ಯಾತ ಧಾರ್ಮಿಕ ಪಂಗಡದ ಪಾಲು ಹೆಚ್ಚಿದೆ ಮತ್ತು ಅಲ್ಪಸಂಖ್ಯಾತ ಜನಸಂಖ್ಯೆಯು ಆತಂಕಕಾರಿಯಾಗಿ ಕುಗ್ಗಿದೆ. ಆದರೆ ಭಾರತದಲ್ಲಿ ಇದಕ್ಕೆ ತದ್ವಿರುದ್ಧವಾಗಿರುವುದು ಗಮನಾರ್ಹವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ