Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇತಿಹಾಸ ನಿರ್ಮಿಸಿದ ಕಾಂಗ್ರೆಸ್ ಅಭ್ಯರ್ಥಿ! ಸಂಡೂರಿ ನಲ್ಲಿ ವಿಜಯಪಾತಕೆ ಹಾರಿಸಿದ ಕಾಂಗ್ರೇಸ್ ಮೊದಲ ಮಹಿಳಾ ಅಭ್ಯರ್ತಿ ಇ. ಅನ್ನಪೂರ್ಣ ಗೆ ಗೆಲವು

ಸಂಡೂರು: ಸಂಡೂರು (Sanduru) ವಿಧಾನಸಭೆ ಉಪಚುನಾವಣೆಯ (By Election) ಫಲಿತಾಂಶ (Results) ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ . ಅನ್ನಪೂರ್ಣ ಅವರು ಗೆಲುವು ಕಂಡಿದ್ದಾರೆ. ಮೂಲಕ ಕಾಂಗ್ರೆಸ್ ಅಭ್ಯರ್ಥಿಯು ಸಂಡೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.

ಸತತ 5 ಬಾರಿ  ಗೆಲವು ಸಾದಿಸುತ್ತಾ ಬಂದಿರುವ ಕಾಂಗ್ರೇಸ್ ಪಕ್ಷವು  ಉಪಚುನವಣೆಯಲ್ಲಿ ಜಯ ಬೇರಿ ಬಾರಿಸುವ ಮೂಲಕ  ಜಿಲ್ಲೆಯಲ್ಲಿ ತನ್ನ  ಅಸ್ತಿತ್ವ ಉಳಿಸಿಕೋಳುವಲ್ಲಿ ಯಶಸ್ವಿ ಕಂಡಿದ್ದು  ಇನ್ನು ಬಿಜೆಪಿ   ತನ್ನ ಅಸ್ತಿತ್ವ ಉಳಿಸಿಕೋಳ್ಳುವುದಕ್ಕೆ  ಘಟನುಘಟಿ ನಾಯಕರಗಳು ಬೀಡುಬಿಟ್ಟು ಪ್ರಚಾರ ಕೈಗೋಂಡರು   ಮತದಾರರು ಮಾತ್ರ ಈಬಾರಿ ಗೆಲವು ಸಾದಿಸಲು ಸಹಕರಿಸಲಿಲ್ಲ

 ಅಂಚೆ ಮತ ಎಣಿಕೆಯಿಂದ ಇವಿಎಂ ಮತ ಎಣಿಕೆಯ ಮೂರು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಮಧ್ಯದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ಇದೀಗ ಅಂತಿಮವಾಗಿ 9 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಕಂಡಿದ್ದಾರೆ.

ಇತ್ತ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ‌ಬಂಗಾರಿ ಹನುಮಂತು ‌ಮಾಧ್ಯಮದವರೊಂದಿಗೆ ಮಾತನಾಡಿದ್ದು, ಈ ಸೋಲಿನ ಹೊಣೆಯನ್ನು ನಾನು ಒತ್ತುಕೊಳ್ಳುತ್ತೇನೆ. ಯಾರ ಮೇಲೂ‌ ಇದನ್ನು ಹೊರಿಸಲ್ಲ. ಕಾಂಗ್ರೆಸ್ ‌ಹಣ ಬಲದಿಂದ‌‌ ಈ ಚುನಾವಣೆ ಗೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸಚಿವ ಶಿವರಾಜ ತಂಗಡಗಿ ಉಸ್ತುವಾರಿ ‌ಹೊತ್ತಿದ್ದ ಪ್ರದೇಶ ಸೇರಿ ಸಚಿವರು ಇದ್ದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ ಎಂದು ಹೇಳಿದರು.

ಅಂಕಿ-ಅಂಶಗಳ ಪ್ರಕಾರ ಈ ಸೋಲು ನಮಗೆ ಸೋಲೆ ಅಲ್ಲ. ಚುನಾವಣೆ ಹತ್ತಿರ ಇದ್ದಾಗ ಎಲ್ಲ‌ ಮಹಿಳೆಯರ ಖಾತೆಗೆ 2 ಸಾವಿರ ಹಣ ಹಾಕಿದರು. ವೋಟಿಗೆ 2 ಸಾವಿರ ಕೊಟ್ಟು ಮತಗಳನ್ನು ಖರೀದಿ‌ ಮಾಡಿದರು. 2028 ರಲ್ಲಿ ಸಂಡೂರಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ನಾನು ಅಲ್ಲಿಯೇ ಮನೆ ಮಾಡಿ ಜನರ ಜತೆ ಇರುತ್ತೇನೆ. 2028ರಲ್ಲಿ ಯಾರೇ ಅಭ್ಯರ್ಥಿ ಆಗಲಿ‌ ಒಗ್ಗಟ್ಟಿನಿಂದ ತುಕಾರಾಂ, ಸಂತೋಷ ‌ಲಾಡ್ ಅವರನ್ನು ಸೋಲಿಸುತ್ತೇವೆ ಎಂದು ಹೇಳಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ