Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯ ಮೌಲ್ಯಗಳು ಮುಖ್ಯ: ಪ್ರೊ‌. ಎನ್. ಚಿನ್ನಸ್ವಾಮಿ ಸೋಸಲೆ

ಜಾತಿ, ಧರ್ಮ, ಮೌಡ್ಯ ಇವೆಲ್ಲಾವನ್ನು ಮರೆತು ಮಾನವಿಯ ಮೌಲ್ಯಗಳನ್ನು ಪ್ರತಿಯೊಬ್ಬರು ಬೆಳೆಸಿಕೊಂಡು, ಸಮಾಜದಲ್ಲಿ ಜೀವನ ನಡೆಸುವುದು ಬಹಳ ಮುಖ್ಯ ಎಂದು ಕನ್ನಡ ವಿಶ್ವವಿದ್ಯಾಲಯದ ಹಂಪಿಯ ಚಿರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ‌. ಎನ್. ಚಿನ್ನಸ್ವಾಮಿ ಸೋಸಲೆ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಗರದ ಶ್ರೀ ಶಂಕರ್ ಆನಂದಸಿಂಗ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಎಂ.ಕಲ್ಲಹಳ್ಳಿ ಇವರ ಸಂಯುಕ್ತಾಶ್ರದಲ್ಲಿ ವಿಜಯ ನಗರ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಹಿ ಅವರು ಉದ್ಘಾಟಿಸಿದರು .



ಪ್ರಾಸ್ತಾವಿಕವಾಗಿ ಸಂಸ್ಥೆಯ ಅಧ್ಯಕ್ಷ ಅಕ್ಕಿ ಮಲ್ಲಿಕಾರ್ಜುನ ಪ್ರಸ್ತಾವಿಕವಾಗಿ ಮಾತನಾಡಿದರು.
ನಂತರ ಕನ್ನಡ ವಿಶ್ವವಿದ್ಯಾಲಯದ ಹಂಪಿಯ ಚರಿತ್ರೆ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ‌. ಎನ್. ಚಿನ್ನಸ್ವಾಮಿ ಸೋಸಲೆ ಅವರು ಕರ್ನಾಟಕದಲ್ಲಿ ದಲಿತ ಚಳುವಳಿಗಳು ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಮುಖ್ಯವಾಗ ಜಾತಿ, ಧರ್ಮ, ಮೌಡ್ಯ ಇವೆಲ್ಲಾವನ್ನು ಮರೆತು ಮಾನವಿಯ ಮೌಲ್ಯಗಳನ್ನು ಪ್ರತಿಯೊಬ್ಬರು ಬೆಳೆದುಕೊಂಡು ಸಮಾಜದಲ್ಲಿ ಜೀವನ ನಡೆಸುವುದು ಬಹಳ ಮುಖ್ಯ ಎಂದರು.ಶೋಷಣೆ ಎನ್ನುವುದು ಎಲ್ಲಾ ವರ್ಗದಲ್ಲಿ ಇದೆ. ಅದು ಕೆಳವರ್ಗಕ್ಕೆ ಸೀಮಿತವಾಗಿಲ್ಲ ಇದನ್ನು ಪ್ರತಿಯೊಬ್ಬರು ಪ್ರಸ್ತುತವಾಗ ಅರಿತು ನಡೆಯಬೇಕಾಗಿದೆ ಹಾಗೂ ಪ್ರತಿಯೊಬ್ಬರು ಪ್ರಶ್ನೆ ಮಾಡಿವ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದರು.



ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನಾಯಕರ ಭೀಮೇಶ್ ಪ್ರಥಮಸ್ಥಾನ, ಈ.ಉಮಾದೇವಿ ದ್ವಿತೀಯ ಸ್ಥಾನ ಹಾಗೂ ಆಯುಷಾ ಖಾನಂ ತೃತೀಯ ಸ್ಥಾನ ಪಡೆದುಕೊಂಡರು.

ಸಂಸ್ಥೆಯ ಸದಸ್ಯೆ ಸಂಗಮ್ಮ ಅಕ್ಕಿ ಮಲ್ಲಿಕಾರ್ಜುನ ಪ್ರಾರ್ಥನೆ ಮಾಡಿ, ಗುಜ್ಜಲ ಹುಲುಗಪ್ಪ ಸ್ವಾಗತ, ನಿರೂಪಣೆ ಅಮೃತ್ ನಾಯ್ಕ್, ಅತಿಥಿ ಪರಿಚಯ ಡಾ.ಎರಿಸ್ವಾಮಿ ಅವರು ನೆರವೇರಿಸಿದರು‌.

ಮೌನೇಶ್ ಬಡಿಗೇರ್ ಹಾಗೂ ನಾಗರಾಜ್ ಪತ್ತಾರ್ ಅವರು ಸಂಗೀತ ಕಾರ್ಯಕ್ರಮ ನೇರವೇರಿಸಿದರು.ಈ ಸಮಯದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಶಿವಪ್ಪ, ಉಪನ್ಯಾಸಕರಾದ ಡಾ.ಜಯಣ್ಣ, ಡಾ.ಕೆ ಪನ್ನಂಗಧರ, ಡಾ.ಹೆಬಸೂರ್,ಡಾ ಸುರೇಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಉಪನ್ಯಾಸಕರು ಮತ್ತು ಹವ್ಯಾಸಿ ಬರಹಗಾರರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ