Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ

ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.

ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.
ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿತು. ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಎದುರು ಅಫ್ಘಾನಿಸ್ತಾನ ಮಂಡಿಯೂರಿತು. ಬುಮ್ರಾ 4 ಓವರ್ ಗಳಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಕುಡ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 134 ರನ್‌ಗಳಿಗೆ ಆಲೌಟ್ ಆಯಿತು. ಸೂರ್ಯಕುಮಾರ್ ಆಸರೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ (8 ರನ್) ಅವರ ವಿಕೆಟ್ ಕಳೆದುಕೊಂಡಿತು. ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 43 ರನ್‌ ಗಳಿಸುವ ಮೂಲಕ ಆಸರೆಯಾದರು

ಪಂತ್ 20 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 24 ರನ್ ಗಳಿಸಿದರು. ಶಿವಂ ದುಬೆ ಕೂಡ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. 28 ಎಸೆತಗಳಲ್ಲಿ 53 ರನ್ ಗಳಿಸಿ ಭಾರತ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಹಾರ್ದಿಕ್ ಪಾಂಡ್ಯ 32 ರನ್ ಗಳಿಸಿದರು. ಜಡೇಜಾ 7 ರನ್, ಅಕ್ಷರ್ ಪಟೇಲ್ 12 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಭಾರತ ಸೂಪರ್ 8ರ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಜೂನ್ 22ರಂದು ಈ ಪಂದ್ಯ ನಡೆಯಲಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ