Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ

ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.

ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.
ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿತು. ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಎದುರು ಅಫ್ಘಾನಿಸ್ತಾನ ಮಂಡಿಯೂರಿತು. ಬುಮ್ರಾ 4 ಓವರ್ ಗಳಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಕುಡ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 134 ರನ್‌ಗಳಿಗೆ ಆಲೌಟ್ ಆಯಿತು. ಸೂರ್ಯಕುಮಾರ್ ಆಸರೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ (8 ರನ್) ಅವರ ವಿಕೆಟ್ ಕಳೆದುಕೊಂಡಿತು. ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 43 ರನ್‌ ಗಳಿಸುವ ಮೂಲಕ ಆಸರೆಯಾದರು

ಪಂತ್ 20 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 24 ರನ್ ಗಳಿಸಿದರು. ಶಿವಂ ದುಬೆ ಕೂಡ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. 28 ಎಸೆತಗಳಲ್ಲಿ 53 ರನ್ ಗಳಿಸಿ ಭಾರತ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಹಾರ್ದಿಕ್ ಪಾಂಡ್ಯ 32 ರನ್ ಗಳಿಸಿದರು. ಜಡೇಜಾ 7 ರನ್, ಅಕ್ಷರ್ ಪಟೇಲ್ 12 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಭಾರತ ಸೂಪರ್ 8ರ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಜೂನ್ 22ರಂದು ಈ ಪಂದ್ಯ ನಡೆಯಲಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ