Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬಳ್ಳಾರಿ,ಜು.15
ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ಬಿಐಇಸಿ ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು.
ಇದರೊಂದಿಗೆ, ಸ್ಟಾರ್ಟ್ಅಪ್‌ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ ‘ಎಐ ಹಬ್' ಅನ್ನು ಇನ್ ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
*ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಉಪಕ್ರಮಗಳು:*
ಭಾರತದ ಮೊದಲ ಸರ್ಕಾರಿ ಎಐ ವಿಶ್ವವಿದ್ಯಾಲಯ: ಜಾಗತಿಕ ಮಟ್ಟದ ಎಐ ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು.
*ಎಐ ಹಬ್:*
ನವೋದ್ಯಮಗಳು, ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿ ಕೈಗೊಳ್ಳಲು ಇದು ಅತ್ಯಾಧುನಿಕ ಇನ್‌ಕ್ಯುಬೇಶನ್ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.
ಸರ್ಕಾರದ ದೂರದೃಷ್ಟಿ ಮತ್ತು ‘ಎಐ ನೇಟಿವ್' ರಾಜ್ಯದ ಗುರಿ:
ತಂತ್ರಜ್ಞಾನವನ್ನು ಕೇವಲ ಘೋಷಣೆಯಾಗಿ ಉಳಿಸದೆ, ಆಡಳಿತ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಂಡು ಕರ್ನಾಟಕವನ್ನು ‘ಎಐ ನೇಟಿವ್’ (ಕೃತಕ ಬುದ್ಧಿಮತ್ತೆ ಆಧಾರಿತ) ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಶಿಕ್ಷಣ: ಶಿಕ್ಷಕರಿಗೆ ಹೆಚ್ಚು ಪರಿಣಾಮಕಾರಿಯಾಗಿ ಬೋಧಿಸಲು ಎಐ ಆಧಾರಿತ ಸಹಾಯಕ ಪರಿಕರಗಳ ಬಳಕೆ.
ಆರೋಗ್ಯ ರಕ್ಷಣೆ: ಕಾಯಿಲೆಗಳ ಆರಂಭಿಕ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಚಿಕಿತ್ಸಾ ಬೆಂಬಲ.
ಕೃಷಿ: ರೈತರಿಗೆ ನೈಜ ಸಮಯದ ನಿಖರ ಕೃಷಿ ಸಲಹೆಗಳನ್ನು ನೀಡುವುದು.
ಸಾರ್ವಜನಿಕ ಸೇವೆಗಳು: ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಅತ್ಯಂತ ವೇಗವಾಗಿ ಮತ್ತು ಗೌರವಯುತವಾಗಿ ತಲುಪಿಸುವುದು.
ಸಣ್ಣ ಉದ್ಯಮಗಳು: ಸ್ಥಳೀಯ ಸಣ್ಣ ಉದ್ಯಮಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಎಐ ತಂತ್ರಜ್ಞಾನದ ನೆರವು ನೀಡುವುದು.
ಗೂಗಲ್ ಸಂಸ್ಥೆಯೊAದಿಗೆ ಪಾಲುದಾರಿಕೆಗೆ ಕರೆ: ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಗೂಗಲ್ ಸಂಸ್ಥೆಯ ಕೊಡುಗೆಯನ್ನು ಶ್ಲಾಘಿಸಿದ ಡಿ.ಕೆ. ಶಿವಕುಮಾರ್ ಅವರು, ಮುಖ್ಯವಾಗಿ 5 ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಗೂಗಲ್ ಸಂಸ್ಥೆಗೆ ಆಹ್ವಾನ ನೀಡಿದರು.
ಸ್ಥಳೀಯ ಪರಿಹಾರಗಳು: ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಣ್ಣ ಉದ್ಯಮಗಳಿಗೆ ಸೂಕ್ತವಾದ ಎಐ ಪರಿಕರಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸುವುದು.
ಸ್ಟಾರ್ಟ್ಅಪ್‌ಗಳಿಗೆ ಬೆಂಬಲ: ಭಾರತದ ಸ್ಥಳೀಯ ಸವಾಲುಗಳಿಗೆ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ಸ್ಟಾರ್ಟ್ಅಪ್‌ಗಳಿಗೆ ಉತ್ತೇಜನ ನೀಡುವುದು.
ವಿದ್ಯಾರ್ಥಿಗಳಿಗೆ ಕಲಿಕಾ ಅವಕಾಶ: ಕರ್ನಾಟಕದಾದ್ಯಂತ ವಿದ್ಯಾರ್ಥಿಗಳಿಗೆ ಎಐ ತರಬೇತಿ ಮತ್ತು ಕಲಿಕಾ ಅವಕಾಶಗಳನ್ನು ವಿಸ್ತರಿಸುವುದು.
ಜವಾಬ್ದಾರಿಯುತ ಎಐ ಪ್ರಯೋಗಾಲಯ: ಕರ್ನಾಟಕವನ್ನು ಜಾಗತಿಕ ಮಟ್ಟದ ಸುರಕ್ಷಿತ, ನಂಬಿಕಸ್ಥ ಮತ್ತು ಜವಾಬ್ದಾರಿಯುತ ತಂತ್ರಜ್ಞಾನದ ಪ್ರಯೋಗಾಲಯವನ್ನಾಗಿ ರೂಪಿಸುವುದು.
ದೀರ್ಘಕಾಲೀನ ಹೂಡಿಕೆ: ಕರ್ನಾಟಕದ ತಂತ್ರಜ್ಞಾನ ಪರಿಸರ ವ್ಯವಸ್ಥೆ ಹಾಗೂ ಮೂಲಸೌಕರ್ಯದಲ್ಲಿ ಗೂಗಲ್‌ನ ದೀರ್ಘಕಾಲೀನ ಪಾಲುದಾರಿಕೆಯನ್ನು ಬಲಪಡಿಸುವುದು.
ತಂತ್ರಜ್ಞಾನ ಮತ್ತು ಹೂಡಿಕೆ ದೃಷ್ಟಿಕೋನ: ಭಾರತದ ಒಟ್ಟು ಸಾಫ್ಟ್ವೇರ್ ರಫ್ತಿನಲ್ಲಿ ಕರ್ನಾಟಕವು ಸುಮಾರು ಶೇ. 40 ರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು 17,000 ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳಿಗೆ ಹಾಗೂ ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ ನೆಲೆಯಾಗಿದೆ.
ಸುಧಾರಿತ ಕಂಪ್ಯೂಟಿAಗ್, ಡೇಟಾ ಸೆಂಟರ್‌ಗಳು ಮತ್ತು ಸಂಶೋಧನೆಗೆ ಅಗತ್ಯವಿರುವ ಡಿಜಿಟಲ್ ಮೂಲಸೌಕರ್ಯಗಳನ್ನು ಸರ್ಕಾರ ಇನ್ನಷ್ಟು ಬಲಪಡಿಸಲಿದೆ.
*ಬಾಕ್ಸ್:*
‘ಡೆವಲಪರ್‌ಗಳು ಧೈರ್ಯವಾಗಿ ಹೊಸದನ್ನು ನಿರ್ಮಿಸಲಿ, ಉದ್ಯಮಿಗಳು ದೊಡ್ಡ ಕನಸು ಕಾಣಲಿ, ಸಂಶೋಧಕರು ಆವಿಷ್ಕಾರವನ್ನು ಮುಂದುವರಿಸಲಿ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುತ್ತಿರಲಿ. ಕೃತಕ ಬುದ್ಧಿಮತ್ತೆಯು ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯಿಂದ ಕೂಡಿರುವುದನ್ನು ಕರ್ನಾಟಕ ಸರ್ಕಾರ ಖಚಿತಪಡಿಸಲಿದೆ.’
- ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯಮುಕ್ತ ಗ್ರಾಮಗಳಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ: ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಅಗತ್ಯಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆ