Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹವಾಮಾನ ಸ್ಥಿತಿಸ್ಥಾಪಕತ್ವಕ್ಕೆ ಸಮಗ್ರ ಕೃಷಿ ಆಸರೆ: ಜಿಲ್ಲಾ ಪಂಚಾಯತ್‌ ಸಿ.ಇ.ಒ. ಅಭಿಮತ

ಮಂಡ್ಯ: ಜಿ.ಪಂ. ಸಿ.ಇ.ಒ. ನಂದಿನಿ ಕೆ.ಆರ್.ರವರು ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಹೋಬಳಿಯ ಚನ್ನಪ್ಪನದೊಡ್ಡಿ ಗ್ರಾಮದ ನೈಸರ್ಗಿಕ ಕೃಷಿಕರಾದ ಶ್ರೀ ಕೆಂಪೇಗೌಡ ಬಿನ್‌ ಬೋರಯ್ಯ ರವರ ಜಮೀನಿಗೆ ಭೇಟಿ ನೀಡಿ, ಅವರು ಅನುಸರಿಸುತ್ತಿರುವ ಕೃಷಿ ಪದ್ದತಿಯ ಬಗ್ಗೆ ಪರಿಶೀಲಿಸಿದರು.
ಹವಾಮಾನ ಬದಲಾವಣೆ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಂತಹ ಕಠಿಣ ಸನ್ನಿವೇಶಗಳಲ್ಲಿ ಬೆಳೆಗಳನ್ನು ರಕ್ಷಿಸಿಕೊಳ್ಳಲು, ನಷ್ಟವನ್ನು ತಡೆಯಲು ಮತ್ತು ನಿರಂತರ ಸುಸ್ಥಿರ ಆದಾಯ ಪಡೆಯಲು 'ಹವಾಮಾನ ಸ್ಥಿತಿಸ್ಥಾಪಕತ್ವ' (Climate Resilience) ಕೃಷಿ ಪದ್ಧತಿಗಳನ್ನು ರೈತರ ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಮಣ್ಣಿನ ಆರೋಗ್ಯ ಸುಧಾರಣೆ ಇಂದಿನ ಆದ್ಯತೆಯಾಗಬೇಕಿದೆ. ಜಿಲ್ಲೆಯಲ್ಲಿ ರೈತರು ಏಕಬೆಳೆ ಬೆಳೆಯುವುದರ ಬದಲಾಗಿ ಸಮಗ್ರ ಕೃಷಿ ಪದ್ಧತಿಗೆ, ನೈಸರ್ಗಿಕ ಕೃಷಿ ಅಥವಾ ಸಾವಯವ ಕೃಷಿ ಪದ್ಧತಿಗಳಿಗೆ ಹೆಚ್ಚಿನ ಮನ್ನಣೆ ನೀಡಿ, ಸುಸ್ಥಿರ ಆದಾಯಕ್ಕಾಗಿ ಕೃಷಿ ನಂತರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಒಳಗೊಂಡಂತೆ ವಿವಿಧ ಆದಾಯೋತ್ಪನ್ನ ಚಟುವಟಿಕೆಗಳಿಗೆ ಚಿಂತನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಜಿಲ್ಲೆಯಲ್ಲಿ ಅನಾವೃಷ್ಠಿ ಪರಿಸ್ಥಿತಿಯಿದ್ದು, ಅಲ್ಪಾವಧಿ ಹಾಗೂ ಕಡಿಮೆ ನೀರಿನಿಂದ ನಿರೀಕ್ಷಿತ ಉತ್ಪಾದನೆ ಪಡೆಯಬಹುದಾದ ಪರ್ಯಾಯ ಬೆಳೆಗಳನ್ನು ಆಯ್ಕೆಮಾಡಿಕೊಳ್ಳಬೇಕಿದೆ. ಸಮರ್ಥ ನೀರಿನ ಬಳಕೆಗಾಗಿ ಹನಿ ಅಥವಾ ತುಂತುರು ನೀರಾವರಿ ಘಟಕ, ಸಂರಕ್ಷಣಾತ್ಮಕ ನೀರಾವರಿಗಾಗಿ ಕೃಷಿ ಹೊಂಡ ಬಳಕೆಯ ವಿಧಾನಗಳನ್ನು ಅನುಸರಿಸಬೇಕಿದೆ. ಒಂದೇ ಬೆಳೆ ಬದಲಾಗಿ ವಿವಿಧ ಬೆಳೆಗಳನ್ನು ಬೆಳೆದಾಗ ಹವಾಮಾನ ಬದಲಾವಣೆಗೆ ನಷ್ಟದ ಪ್ರಮಾಣ ಕಡಿಮೆಯಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಕೆಂಪೇಗೌಡರವರು ಕಳೆದ 10 ವರ್ಷದಿಂದ ನೈಸರ್ಗಿಕ ಕೃಷಿ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿ, ಆರ್ಥಿಕವಾಗಿ ಸುಸ್ಥಿರತೆ ಸಾಧಿಸಿ ಇತರೆ ರೈತರಿಗೆ ಮಾದರಿಯಾಗಿದ್ದಾರೆ. ಇವರು 2 ½ ಎಕರೆ ಜಮೀನು ಹೊಂದಿದ್ದು ನೈಸರ್ಗಿಕ ಕೃಷಿ ಪದ್ದತಿಯಲ್ಲಿ ಭತ್ತ, ಕಬ್ಬು, ಸೊಪ್ಪು, ತರಕಾರಿ ಹಾಗೂ ಹಲವಾರು ಹಣ್ಣು ಬೆಳೆಗಳನ್ನು ಬೆಳೆದು ತಮ್ಮದೆ ಮಳಿಗೆಯಲ್ಲಿ ಹಾಗೂ ಪ್ರತಿ ಬುಧವಾರ ಹಾಗೂ ಭಾನುವಾರ ಮಂಡ್ಯ ನಗರದ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ ಎದುರು ನಡೆಯುವ ಸಾವಯವ ಸಂತೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ, ನಿರಂತರ ಆದಾಯ ಗಳಿಸುತ್ತಿದ್ದಾರೆ ಇದು ಉಳಿದ ರೈತರಿಗೂ ಮಾದರಿಯಾಗಲಿ ಎಂದು ತಿಳಿಸಿದರು.
*12 ಅಡಿ ಅಂತರದ ಪಟದಲ್ಲಿ ಕಬ್ಬು ಬೆಳೆ:* ಕಳೆದ ಐದು ವರ್ಷಗಳಿಂದ 12 ಅಡಿ ಅಂತರದ ಪಟದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಕಬ್ಬು ಬೆಳೆದು, ಪ್ರತಿ ನಿತ್ಯ ಇವರು 40-50 ಕೆ.ಜಿ. ಕಬ್ಬು ಮಾತ್ರ ಕಟಾವು ಮಾಡಿ ಮಂಡ್ಯ ನಗರದಲ್ಲಿ ತಮ್ಮ ಖುಷಿ ಆರ್ಗ್ಯಾನಿಕ್ಸ್ ಮಳಿಗೆಯಲ್ಲಿ, ಕಬ್ಬಿನ ಜ್ಯೂಸ್‌ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಟನ್‌ ಕಬ್ಬಿನಿಂದ 700 ಲೀಟರ್‌ ಜ್ಯೂಸ್‌ ಸಿದ್ದಪಡಿಸಿ ರೂ. 50,000/- ವರೆಗೆ ಆದಾಯ ಗಳಿಸುತ್ತಿದ್ದಾರೆ. ಅಲ್ಲದೆ ತಾವು ಬೆಳೆದ ಕಬ್ಬಿನಿಂದ ಬೆಲ್ಲ ತಯಾರಿಕೆ ಸಹ ಮಾಡಿ ಮಾರಾಟ ಮಾಡುತ್ತಿದ್ದಾರೆ.
*ಕಬ್ಬಿನಲ್ಲಿ ಅಂತರ ಬೆಳೆ:* 12 ಅಡಿ ಅಂತರದ ಪಟದಲ್ಲಿ ಲಭ್ಯವಿರುವ ಜಾಗದಲ್ಲಿ ವಿವಿಧ ಬ್ಯಾಚ್‌ಗಳಲ್ಲಿ ಮೆಂತ್ಯ, ಪಾಲಕ್‌, ಸಪ್ಸಿಗೆ, ಕೊತ್ತಂಬರಿ, ಕಿಲಕಿರೆ, ದಂಟು ಸೊಪ್ಪು ಹಾಗೂ ಬೆಂಡೆ ಬೆಳೆಗಳನ್ನು ಬೆಳೆಯುತ್ತಿರುವುದನ್ನು ಸಿ.ಇ.ಒ. ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾನವ ಕಳ್ಳ ಸಾಗಣಿಕೆ ತಡೆಗೆ ಜಾಗೃತಿ ಅಗತ್ಯ: ಡಾ. ಸಂಜಯ್ ದೊಡ್ಡಮನಿ. *ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕ ವರದಿಯಿಂದ ದೃಢ -- ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸುಹವಾಮಾನ ಸ್ಥಿತಿಸ್ಥಾಪಕತ್ವಕ್ಕೆ ಸಮಗ್ರ ಕೃಷಿ ಆಸರೆ: ಜಿಲ್ಲಾ ಪಂಚಾಯತ್‌ ಸಿ.ಇ.ಒ. ಅಭಿಮತಸಮಾಜದ ಹಿತ ಬಯಸುವುದೇ ಸಾಹಿತ್ಯಸಮಾಜದ ಹಿತ ಬಯಸುವುದೇ ಸಾಹಿತ್ಯಬಳ್ಳಾರಿ ರಾಘವ ಮೆಮೋರಿಯಲ್ ಅಸೋಸಿಯೇಷನ್, 146ನೇ ಜಯಂತಿ ಅಂಗವಾಗಿ ರಾಜ್ಯ ಪ್ರಶಸ್ತಿ ಪ್ರದಾನ, ನಾಟಕೋತ್ಸವಆಗಸ್ಟ್ 15ರಿಂದ ಕೊಪ್ಪಳದಲ್ಲಿ 10ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನಕುಡತಿನಿ: ಕಟ್ಟಡ ತ್ಯಾಜ್ಯ ಎಲ್ಲೆಂದರಲ್ಲಿ ಚೆಲ್ಲಿದರೆ, ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ಭಾರೀ ದಂಡದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳುಬಳ್ಳಾರಿ: ಆಗಸ್ಟ್ 2 ರಂದು ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ