Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ


ಧಾರವಾಡ ಮಾರ್ಚ 21: ಧಾರವಾಡ ಕೇಂದ್ರ ಕಾರಾಗೃಹ, ಸಾಧನಾ ಸಂಸ್ಥೆ ಮತ್ತು ಪ್ರಿಜನ್ ಮಿನಿಸ್ಟರಿ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಮಾರ್ಚ್ 18, 2025 ರ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಕಾರಾಗೃಹದ ಮಹಿಳಾ ವಿಭಾಗದಲ್ಲಿರುವ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.



ಸಾಧನಾ ಸಂಸ್ಥೆಯ ಮುಖ್ಯಸ್ಥೆ ಇಸಾಬೆಲ್ ಕ್ಸೆವಿಯರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಧನಾ ಸಂಸ್ಥೆಯು ಕಾರಾಗೃಹದ ಮಹಿಳಾ ಬಂದಿಗಳಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಏರ್ಪಡಿಸಿದ್ದು, ಮಹಿಳಾ ಬಂದಿಗಳು ಯಾವುದೇ ರೀತಿಯ ಮಾನಸಿಕ ಒತ್ತಡಗಳಿಗೆ ಒಳಗಾಗದಂತೆ ಆರೋಗ್ಯಕರ ಜೀವ ರೂಪಿಸಿಕೊಳ್ಳಲು ಹಲವಾರು ಚಟುವಟಿಕೆಗಳನ್ನು ಬಂದಿಗಳಿಗಾಗಿ ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಲು ಸದಾ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.



ಬೆಥನಿ ಕನ್ಯಾಸ್ರ್ತೀಯರ ಸಂಸ್ಥೆಯ ಪ್ರಾಂತ್ಯಾಧಿಕಾರಿ ಸಿಸ್ಟರ್ ಸಾಲಿ ಡಿಸೋಜಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಪ್ಪು ಮಾಡಿ ಕೆಲವರು ಬಂದಿಖಾನೆ ನಿವಾಸಿಗಳಾಗಿದ್ದು, ಕಾರಾಗೃಹವಾಸದಲ್ಲಿದ್ದಾರೆ. ಕೆಲವರು ತಪ್ಪು ಮಾಡಿಯೂ ಕಾನೂನಿಂದ ತಪ್ಪಿಸಿಕೊಂಡು ಹೊರಗಡೆ ಇದ್ದಾರೆ. ಕಾರಾಗೃಹವು ಮನಃಪರಿವರ್ತನೆಗಿರುವ ಒಂದು ಅವಕಾಶ ಎಂದು ಅರಿತುಕೊಳ್ಳಬೇಕು. ಜೊತೆಯಲ್ಲಿದ್ದವರನ್ನು ಪ್ರೀತಿಸಿ, ಗೌರವಿಸುವುದು ಮುಖ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಡಾ. ಸಂಗೀತಾ ಮಾನೆ, ಸಿಸ್ಟರ್ ಅಲ್ಫಿನಾ ರೋಡ್ರಿಕ್ಸ್, ಸಂಸ್ಥೆಯ ಜೈಲರ ಮಹಾದೇವಿ ಮರಕಟ್ಟಿ ಅವರು ಉಪಸ್ಥಿತರಿದ್ದರು.



ಮಹಿಳಾ ಬಂದಿ ಸುನಂದಾ ಹುಬ್ಬಳ್ಳಿ ಅವರು ಪ್ರಾರ್ಥಿಸಿದರು. ಶಿಕ್ಷಕ ಪಿ.ಬಿ.ಕುರಬೆಟ್ಟ ಅವರು ಸ್ವಾಗತಿಸಿದರು. ಸಂಸ್ಥೆಯ ವೈಶಾಲಿ ನಾಯ್ಕ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾರಾಗೃಹ ವಾಸಿಗಳಾದ ಮಹಿಳೆಯರು, ಕಾರಾಗೃಹ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ