Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ





ಬಳ್ಳಾರಿ,ಜು.



ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿದೆ.



ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.



ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು.



ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಹಿಂಭಾಗ, ಬಳ್ಳಾರಿ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 21 ರ ಒಳಗಾಗಿ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ