Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ


ಬಳ್ಳಾರಿ,ಏ.24

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಪಂಗಡದ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ-ಒಡೆತನ ಯೋಜನೆಯಡಿ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಜಮೀನು ಮಾರಾಟ ಮಾಡುವ ಭೂ-ಮಾಲೀಕರಿಂದ ಹಾಗೂ ಸೌಲಭ್ಯ ಪಡೆಯಬಯಸುವ ಫಲಾನುಭವಿಗಳಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹಿಂದೆ ಜಿಲ್ಲಾ ಕಚೇರಿಯಲ್ಲಿದ್ದ ಹಳೆಯ ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ರದ್ದುಪಡಿಸಲಾಗಿದ್ದು, ಈಗ ಸಂಪೂರ್ಣವಾಗಿ ಹೊಸ ಪ್ರಸ್ತಾವನೆಗಳನ್ನು ಮಾತ್ರ ಸ್ವೀಕರಿಸಲಾಗುವುದು.

ಅರ್ಜಿಗಳನ್ನು ಮೇ 04 ರೊಳಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಸಂತೋಷಿ ಮಾತಾ ಮಂದಿರದ ಎದುರು, ಪಿ.ಡಬ್ಲೂö್ಯ.ಡಿ. ಕಚೇರಿ ಹತ್ತಿರ, ಬಳ್ಳಾರಿ. ಇಲ್ಲಿಗೆ ಸಲ್ಲಿಸಬೇಕು.

*ಭೂ-ಮಾಲೀಕರಿಗೆ ಸೂಚನೆಗಳು:*

ಜಮೀನು ಮಾರಾಟ ಮಾಡಲು ಇಚ್ಛಿಸುವ ಮಾಲೀಕರು ನಿಯಮಗಳನ್ನು ಪಾಲಿಸಬೇಕು. ಭೂ-ಮಾಲೀಕರು ಖುದ್ದಾಗಿ ನಮೂನೆ-1ರ ಒಪ್ಪಿಗೆ ಪತ್ರವನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಜಮೀನಿಗೆ ಸಂಬAಧಿಸಿದ ಪಹಣಿ, ನಕ್ಷೆ ಹಾಗೂ ಅಗತ್ಯವಿರುವ ಎಲ್ಲಾ ಮೂಲ ದಾಖಲಾತಿಗಳನ್ನು ಲಗತ್ತಿಸಬೇಕು. ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೆ ನೇರವಾಗಿ ಕಚೇರಿಯನ್ನು ಸಂಪರ್ಕಿಸಬೇಕು.

*ಫಲಾನುಭವಿಗಳಿಗೆ (ಮಹಿಳಾ ಕೃಷಿ ಕಾರ್ಮಿಕರಿಗೆ) ನಿಯಮಗಳು:*

ಅರ್ಜಿದಾರರು ಕಡ್ಡಾಯವಾಗಿ ಭೂ-ರಹಿತ ಕೃಷಿ ಕಾರ್ಮಿಕ ಮಹಿಳೆ ಆಗಿರಬೇಕು. ತಮಗೆ ಯಾವುದೇ ಜಮೀನು ಇಲ್ಲದಿರುವ ಬಗ್ಗೆ ಸಂಬAಧಪಟ್ಟ ಇಲಾಖೆಯಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಪ್ರತಿಗಳನ್ನು ಸಲ್ಲಿಸಬೇಕು.

ಸಾರ್ವಜನಿಕರು ಹಾಗೂ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗಬಾರದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ