Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಪಟ್ಟಣದ ವಿವಿಧ ರಸ್ತೆ, ವೃತ್ತಗಳ ಮರುನಾಮಕರಣ: ಆಕ್ಷೇಪಣೆಗಳಿಗೆ ಆಹ್ವಾನ



ಬಳ್ಳಾರಿ,ಆ.05

ಕಂಪ್ಲಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ಬಡಾವಣೆ(ನಗರ)ಗಳ ಮುಖ್ಯ ರಸ್ತೆಗಳಲ್ಲಿನ ವೃತ್ತಗಳನ್ನು ಹೊಸದಾಗಿ ನಾಮಕರಣ ಮಾಡಲು ಪಟ್ಟಣದ ವಿವಿಧ ಸಮಾಜದವರು ಮನವಿ ಸಲ್ಲಿಸಿದ್ದು, ನಾಮಕರಣ ಕುರಿತು ಯಾರಿಂದಲಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮತ್ತು ಸಮಂಜಸ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 30 ದಿನದೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು.

ಕಂಪ್ಲಿ ಪಟ್ಟಣದ ನಟರಾಜ ಕಲಾ ಮಂದಿರದ ಮುಂಭಾಗದಲ್ಲಿರುವ ಇರುವ ವೃತ್ತವನ್ನು ‘ದೇವರ ದಾಸಿಮಯ್ಯ ವೃತ್ತ’ ಎಂದು ನಾಮಕರಣ, ವಾರ್ಡ್ ನಂ.17 ರ ನಟರಾಜ ಕಲಾ ಮಂದಿರದ ಮುಂಭಾಗದಲ್ಲಿ ಇರುವ ಕಮಾನಿಗೆ ‘ಶ್ರೀ ಚೌಡೇಶ್ವರ ಮಹಾದ್ವಾರ’ ಎಂದು ನಾಮಕರಣ, ಪಟ್ಟಣದ ವಿನಾಯಕ ನಗರದ 05 ನೇ ಅಡ್ಡರಸ್ತೆಯ ಚತುರ್ಮುಖ ರಸ್ತೆಗೆ ‘ಶ್ರೀ ಮಹಾಯೋಗಿ ವೇಮನ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ ವೃತ್ತ ಎಂದು ನಾಮಕರಣ, ಪಟ್ಟಣದ 05 ನೇ ವಾರ್ಡ್ನ್ನು ‘ಬೀರಲಿಂಗೇಶ್ವರ ನಗರ’ ಎಂದು ಸರ್ಕಾರದ ಸುತ್ತೋಲೆಗಳು ಮತ್ತು ಮಾರ್ಗಸೂಚಿ ಪ್ರಕಾರ ನಾಮಕರಣ ಮಾಡಲು ಉದ್ದೇಶಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಅವಧಿ ಮೀರಿ ಬಂದ ಮನವಿ ಅಥವಾ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ