Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು ತಾಲ್ಲೂಕಿನಾದ್ಯಂತ ‘ಜಾಬ್ ಕಾರ್ಡ್ ಮೇಳ’: ತಾಪಂ ಇಓ ಪಂಪಾಪತಿ ಹಿರೇಮಠ


ಬಳ್ಳಾರಿ,ಆ.21
ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಕುರುಗೋಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ‘ಜಾಬ್ ಕಾರ್ಡ್ ಮೇಳ’ವನ್ನು ಆಯೋಜಿಸಲು ಕುರುಗೋಡು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕುರುಗೋಡು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಓರ್ವಾಯಿ ಹಾಗೂ ಯರಂಗಳಿಗಿ ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಜಾಬ್ ಕಾರ್ಡ್ ನೀಡುವ ಅಭಿಯಾನ ಯಶಸ್ವಿಯಾಗಿ ಪ್ರಾರಂಭವಾಗಿದೆ. ಇದೇ ಮಾದರಿಯಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲೂ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಲು ಮೇಳ ಹಮ್ಮಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಪ್ರಸಕ್ತ ಸಾಲಿನ ಉದ್ಯೋಗ ಖಾತರಿ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಯನ್ನು ವಿಳಂಬ ಮಾಡದೆ ಸಲ್ಲಿಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಹಾಯಕ ನಿರ್ದೇಶಕರಾದ (ನರೇಗಾ) ಶಿವರಾಮರೆಡ್ಡಿ.ಪಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ರೇಣುಕಾಚಾರ್ಯ ಸ್ವಾಮಿ, ತಾಲ್ಲೂಕು ಪಂಚಾಯತ್ ಯೋಜನಾಧಿಕಾರಿ ರಾಧಿಕಾ, ತಾಲ್ಲೂಕಿನ ಎಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
====

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆಕುರುಗೋಡು ತಾಲ್ಲೂಕಿನಾದ್ಯಂತ ‘ಜಾಬ್ ಕಾರ್ಡ್ ಮೇಳ’: ತಾಪಂ ಇಓ ಪಂಪಾಪತಿ ಹಿರೇಮಠ“ಸಾಧನೆಗೆ ಸಮಯದ ಕೊರತೆ ಎಂದೇನಿಲ್ಲ. ಇಚ್ಛಾಶಕ್ತಿ, ಶ್ರಮ, ಆಸಕ್ತಿ ಇದ್ದರೆ ಬದುಕು ಸಾಹಿತ್ಯದ ಹಬ್ಬವಾಗಬಹುದು.”ಕೊಪ್ಪಳಕ್ಕೆ ಶೀಘ್ರದಲ್ಲೇ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ.. ಕ.ಕ.ಸಾರಿಗೆ ನಿಗಮಕ್ಕೆ 400 ನೂತನ ಬಸ್ ಮಂಜೂರು: ಅಧ್ಯಕ್ಷ ಅರುಣ ಕುಮಾರ ಪಾಟೀಲ್ ----ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ: ಅರ್ಜಿ ಆಹ್ವಾನ ----ಚಳ್ಳಾರಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ -- ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆಬಳ್ಳಾರಿ: ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ