Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕ್ಷಯರೋಗ ಮುಕ್ತ ಸಮಾಜಕ್ಕಾಗಿ ಕೈಜೋಡಿಸಿ: ಡಾ. ಇಂದ್ರಾಣಿ ವಿ. ಕರೆ

ಬಳ್ಳಾರಿ,ಆ.28
ಸಾವಿರಾರು ವರ್ಷಗಳಿಂದ ಸಮುದಾಯದಲ್ಲಿ ಬೇರೂರಿರುವ ಕ್ಷಯರೋಗ (ಟಿಬಿ) ನಿರ್ಮೂಲನೆಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದ್ದು, ರೋಗಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಇಂದ್ರಾಣಿ ವಿ. ಅವರು ಹೇಳಿದರು.
ಮಂಗಳವಾರ, ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಸಂಡೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ‘ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊ. ಲಿಮಿಟೆಡ್’ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ’ದಡಿ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಕೋ ಬ್ಯಾಕ್ಟೀರಿಯಾ ಟ್ಯೂಬರ್‌ಕ್ಯುಲೋಸಿಸ್ ಎಂಬ ರೋಗಾಣುವಿನಿಂದ ಗಾಳಿ ಮೂಲಕ ಹರಡುವ ಈ ಕಾಯಿಲೆಯು ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಉಸಿರಾಟದ ತೊಂದರೆ, ಸಂಜೆ ವೇಳೆ ಜ್ವರ, ರಾತ್ರಿ ಮೈ ಬೆವರುವುದು, ಕಫದಲ್ಲಿ ರಕ್ತ, ಎದೆನೋವು, ಹಸಿವಾಗದಿರುವುದು ಹಾಗೂ ತೂಕ ಇಳಿಕೆ ಟಿಬಿಯ ಮುಖ್ಯ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡುಬAದಲ್ಲಿ ಕೂಡಲೇ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ಮಾಡಿಸಿ, 6 ರಿಂದ 9 ತಿಂಗಳು ಕಡ್ಡಾಯವಾಗಿ ಔಷಧ ಸೇವಿಸಿ ಗುಣಮುಖರಾಗಬೇಕು ಎಂದು ತಿಳಿಸಿದರು.
ಸಂಡೂರು ತಾಲೂಕಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ 177 ಕ್ಷಯರೋಗಿಗಳನ್ನು ‘ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್’ ಸಂಸ್ಥೆಯು ದತ್ತು ತೆಗೆದುಕೊಂಡಿದ್ದು, ಮುಂದಿನ ಆರು ತಿಂಗಳ ಕಾಲ ವಿವಿಧ ದವಸ-ಧಾನ್ಯಗಳನ್ನೊಳಗೊಂಡ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಿದೆ. ಇದೇ ರೀತಿಯಾಗಿ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳು ಹಾಗೂ ದಾನಿಗಳು ಕ್ಷಯರೋಗಿಗಳನ್ನು ದತ್ತು ಪಡೆದು ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಮಾತನಾಡಿ, 1882ರಲ್ಲಿ ರಾಬರ್ಟ್ ಕೋಚ್ ಟಿಬಿ ರೋಗಾಣು ಕಂಡುಹಿಡಿದ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಿದೆ. ಪ್ರಸ್ತುತ ಸೂಕ್ತ ಚಿಕಿತ್ಸೆಯಿಂದ ರೋಗವನ್ನು ಸಂಪೂರ್ಣ ಗುಣಪಡಿಸಬಹುದು. ರೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೆಮ್ಮುವಾಗ ಕರವಸ್ತç ಬಳಸಬೇಕು ಹಾಗೂ ಎಲ್ಲೆಂದರಲ್ಲಿ ಉಗುಳಬಾರದು ಎಂದು ಸಲಹೆ ನೀಡಿದರು.
ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮಾಳವಿಕಾ ಅವರು ಮಾತನಾಡಿ, ಇಂತಹ ಜನಹಿತ ಕಾರ್ಯಕ್ರಮಗಳಿಗೆ ತಮ್ಮ ಸಂಸ್ಥೆಯ ಸಿ.ಎಸ್.ಆರ್ ಅನುದಾನದಿಂದ ನೆರವು ನೀಡಲು ಸದಾ ಸಿದ್ಧ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಡೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಹರೀಶ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಪವನ್ ಕುಮಾರ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್. ಕರ್ಜಗಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಂಡೆಗೌಡ, ಡಿಪಿಪಿಎಮ್‌ಸಿ ಬಸವರಾಜ್, ಅನಿಲ್ ಕುಮಾರ್, ಆರ್.ಕೆ.ಎಸ್.ಕೆ ಕೌನ್ಸಲರ್ ಗಳಾದ ಶ್ರೀಧರ, ಪತ್ರೆಗೌಡ, ಕೊಟ್ರೇಶ ಸೇರಿದಂತೆ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುರುಗೋಡಿನಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆಕ್ಷಯರೋಗ ಮುಕ್ತ ಸಮಾಜಕ್ಕಾಗಿ ಕೈಜೋಡಿಸಿ: ಡಾ. ಇಂದ್ರಾಣಿ ವಿ. ಕರೆಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಬಳ್ಳಾರಿ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ಸೆ.15 ರವರೆಗೆ ‘ಜಾಬ್ ಕಾರ್ಡ್ ಮೇಳ' ಆಯೋಜನೆ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್