Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಡುಗೊಲ್ಲ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ರಾಯಚೂರು,ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿಗೆ ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳ ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳು; ಸ್ವಯಂ ಉದ್ಯೋಗ ನೇರಸಾಲ ಯೋಜನೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು). ಗಂಗಾ ಕಲ್ಯಾಣ ಯೋಜನೆ. ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ). ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಯಡಿ ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



ಅರ್ಹತೆಗಳು; ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿವಕ /155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.



ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ 3.50/-ಲಕ್ಷ ರೂ.ಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.



ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ 98,000/- ರೂ. ಮತ್ತು ನಗರ ಪ್ರದೇಶದವರಿಗೆ 1,20,000/-ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಿದೆ.



ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾoಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.



ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಮತ್ತು 7899899039ಗೆ ಸಂಪರ್ಕಿಸುವoತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ