Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಮಲಾ ಶ್ರೀ ಕರಿಯಪ್ಪ ತಾತಾ ಜಾತ್ರೆ; ಮದ್ಯ ಮಾರಾಟ ನಿಷೇಧ ಜಿಲ್ಲಾಧಿಕಾರಿ ನಿತೀಶ್ ಕೆ.


ರಾಯಚೂರು, ತಾಲೂಕಿನ ಕಲ್ಮಲಾ ಗ್ರಾಮದ ಶ್ರೀ ಕರಿಯಪ್ಪ ತಾತಾ ದೇವಸ್ಥಾನದ ಜಾತ್ರೆ ಸುಗಮವಾಗಿ ನಡೆಯಲು ಆಯ್ದ ದಿನಗಳಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ.



ಅಬಕಾರಿ ಕಾಯ್ದೆ 1965ರ ಕಲಂ.21 (1)ರನ್ವಯ ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಶ್ರೀ ಕರಿಯಪ್ಪ ತಾತಾ ಜಾತ್ರೆಯಲ್ಲಿ ಭಕ್ತಾದಿಗಳಿಗೆ ತೊಂದರೆಯಾಗದ0ತೆ ಹಾಗೂ ಕಾನೂನು, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮತ್ತು ಜಾತ್ರೆಯು ಸುಗಮವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ದಿನಾಂಕ:09-08-2024ರ0ದು ಸಂಜೆ 05ಗಂಟೆಯಿ0ದ ದಿನಾಂಕ:10-08-2024 ರಂದು ಬೆಳಿಗ್ಗೆ 6ಗಂಟೆಯವರೆಗೆ, ದಿನಾಂಕ:12-08-2024 ರಂದು ಬೆಳಿಗ್ಗೆ 6ಗಂಟೆಯಿ0ದ ಮರು ದಿನ ಬೆಳಿಗ್ಗೆ 6ಗಂಟೆಯವರೆಗೆ, ದಿನಾಂಕ:19-08-2024 ರಂದು ಬೆಳಿಗ್ಗೆ 6ಗಂಟೆಯಿoದ ಮರು ದಿನ ಬೆಳಿಗ್ಗೆ 6-00 ಗಂಟೆಯವರೆಗೆ ಹಾಗೂ ದಿನಾಂಕ:26-08-2024 ರಂದು ಬೆಳಿಗ್ಗೆ 6ಗಂಟೆಯಿoದ ಮರು ದಿನ ಬೆಳಿಗ್ಗೆ, 6ಗಂಟೆಯವರೆಗೆ ಕಲ್ಮಲಾ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಎಲ್ಲ ರೀತಿಯ ಮಧ್ಯ ತಯಾರಿಕಾ ಘಟಕಗಳು, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು/ ಮಾರಾಟ ಮಳಿಗೆಗಳನ್ನು ಬಂದ್ ಇಡಲು ಆದೇಶ ಹೊರಡಿಸಿದ್ದಾರೆ.



ಈ ಅವಧಿಯಲ್ಲಿ ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರಾಟ ಮಾಡುವುದು ಕಂಡುಬ0ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ