Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಮಲಹಾಸನ್ ಗೆ ಭಾಷಾ ಅಲ್ಪಜ್ಞಾನವಿದೆ : ಪರಮಪೂಜ್ಯ ಡಾಕ್ಟರ್ ಮಹೇಶ್ವರ ಸ್ವಾಮಿ 

ಬಳ್ಳಾರಿ ಜೂನ್ 1 : ಚಲನಚಿತ್ರ ಕಾರ್ಯಕ್ರಮ ಒಂದರಲ್ಲಿ ಕಮಲಹಾಸನ್ ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವನ ಬಾಷಾ ಅಲ್ಪಜ್ಞಾನವನ್ನು ತೋರಿಸುತ್ತದೆ ಎಂದು ಡಾಕ್ಟರ್ ಮಹೇಶ್ವರ ಸ್ವಾಮಿ ತಿಳಿಸಿದರು.


ಅವರು ಇಂದು ನಗರದ ರಾಯಲ್ ಸರ್ಕಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿ, ಕನ್ನಡ ಭಾಷೆಗೆ ಸುಮಾರು ಎರಡರಿಂದ ಮೂರು ಸಾವಿರ ವರ್ಷಗಳ ಇತಿಹಾಸವಿದೆ, ದಕ್ಷಿಣ ಭಾರತದ ಎಲ್ಲಾ ಭಾಷೆಗಳು ಮೂಲ ದ್ರಾವಿಡ ಮತ್ತು ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿವೆ ಹಾಗಿದ್ದಾಗ ನನ್ನ ಭಾಷೆ ಹೆಚ್ಚು ನಿನ್ನ ಭಾಷೆ ಹೆಚ್ಚು ಎಂಬುದು ಮೂರ್ಖತನವಾದೀತು ಎಂದು ಕಮಲಾಸನವರ ಹೇಳಿಕೆಯನ್ನು ಖಂಡಿಸಿದರು. 


 ಜಿಲ್ಲಾಧ್ಯಕ್ಷ ರಾಜಶೇಖರ್ ಮಾತನಾಡಿ, ಕಮಲ್ ಹಾಸನ್ ತಾನಾಡಿದ ಮಾತಿಗೆ ಕ್ಷಮೆಯನ್ನು ಕೇಳದೆ ಹೋದಲ್ಲಿ ಅವರ ಯಾವುದೇ ಚಿತ್ರವನ್ನು ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.


 ಪ್ರತಿಭಟನಾ ಸಂದರ್ಭದಲ್ಲಿ ಕಮಲಹಾಸನ್ ರವರ ಭಾವಚಿತ್ರವನ್ನು ಸುಟ್ಟು ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಕಟ್ಟಿಗೆ ಸೂರಿ, ಸುಂಕಣ್ಣ ಸೇರಿದಂತೆ ಹಲವಾರು ಜನ ರಕ್ಷಣಾ ವೇದಿಕೆಯ ಕಾರ್ಯಕರ್ತರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ